ಮನರಂಜನೆ

ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್ ; ನಿಲ್ಲದ ʻರಾಯʼನ ಅಬ್ಬರ

ಬೆಂಗಳೂರು : ರಾಕಿ ಬಾಯ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ 24 ಗಂಟೆಯಲ್ಲಿ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ. ‌

ಟಾಕ್ಸಿಕ್ ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ ಮೊದಲಾದ ಸಿನಿಮಾಗಳು ಬರೆದಿದ್ದ ದಾಖಲೆಗಳೆಲ್ಲ ಉಡೀಸ್ ಆಗಿವೆ. 24 ಗಂಟೆಯಲ್ಲಿ ‘ಟಾಕ್ಸಿಕ್’ ಟೀಸರ್ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ.

ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದು, ‘ಟಾಕ್ಸಿಕ್’ ಸಿನಿಮಾ ಟೀಸರ್ ಯೂಟ್ಯೂಬ್ ಜೊತೆಗೆ ಇನ್​​ಸ್ಟಾಗ್ರಾಮ್, ಫೇಸ್​​ಬುಕ್ ಸೇರಿದಂತೆ ವಿವಿಧ ಡಿಜಿಟಲ್ ಪ್ಲ್ಯಾಟ್​​ಫಾರ್ಮ್​​ಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಎಲ್ಲಾ ಫ್ಲ್ಯಾಟ್​ಫಾರ್ಮ್​​ಗಳ ವೀಕ್ಷಣೆಗಳನ್ನು ಪರಿಗಣಿಸಿ, ‘ಟಾಕ್ಸಿಕ್’ ಟೀಸರ್ ವೀಕ್ಷಣೆ 200 ಮಿಲಿಯನ್ ಎಂದು ಕೆವಿಎನ್ ಪ್ರೊಡಕ್ಷನ್ಸ್ ಘೋಷಣೆ ಮಾಡಿದೆ. 55 ಲಕ್ಷಕ್ಕೂ ಅಧಿಕ ಲೈಕ್ಸ್​​ಗಳು ಸಿಕ್ಕಿವೆ. ಈ ಮೂಲಕ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ ಎಂದು ಹೇಳಿದೆ.

ಮಾರ್ಚ್ 19ರಂದು ‘ಟಾಕ್ಸಿಕ್’ ಜೊತೆಗೆ ‘ಧುರಂಧರ್ 2’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಈಗಾಗಲೇ ‘ಧುರಂಧರ್’ ಹಿಟ್ ಆಗಿರುವುದರಿಂದ ‘ಧುರಂಧರ್ 2’ ಬಗ್ಗೆ ನಿರೀಕ್ಷೆ ಇದೆ. ಈ ಕಾರಣದಿಂದಲೇ ‘ಟಾಕ್ಸಿಕ್’ ಚಿತ್ರಕ್ಕೆ ಈ ಸಿನಿಮಾ ದೊಡ್ಡ ಸವಾಲಗಾಬಹುದು ಎಂದು ಹೇಳಲಾಗುತ್ತಿದೆ. ಆದರೆ, ‘ಟಾಕ್ಸಿಕ್’ ಚಿತ್ರದ ಅಬ್ಬರ ನೋಡಿ ಬಾಲಿವುಡ್ ಮಂದಿ ದಂಗಾಗಿದ್ದಾರೆ. ಈ ಮೊದಲು ತೆರೆಗೆ ಬಂದಿದ್ದ ‘ಕೆಜಿಎಫ್ 2’ ಸಿನಿಮಾ 24 ಗಂಟೆಯಲ್ಲಿ 109 ಮಿಲಿಯನ್ ಡಿಜಿಟಿಲ್ ವ್ಯೂವ್ಸ್, ‘ಕಾಂತಾರ: ಚಾಪ್ಟರ್ 1’ 107 ಮಿಲಿಯನ್, ‘ಅನಿಮಲ್’ 71 ಮಿಲಿಯನ್ ಹಾಗೂ ‘ಪುಷ್ಪ 2’ 107 ಮಿಲಿಯನ್ ವೀಕ್ಷಣೆ ಕಂಡಿತ್ತು. ಈ ಎಲ್ಲಾ ದಾಖಲೆಗಳನ್ನು ಯಶ್ ಅವರು ಪೀಸ್ ಪೀಸ್ ಮಾಡಿದ್ದಾರೆ.

‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್​ದಾಸ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಯಶ್ ಜೊತೆ ತಾರಾ ಸುತಾರಿಯಾ, ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತೆಲುಗು, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

8 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

8 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

9 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

18 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

18 hours ago