ಮನರಂಜನೆ

ಅಂದುಕೊಂಡ ದಿನದಂದೇ ‘ಟಾಕ್ಸಿಕ್’ ಬಿಡುಗಡೆ: ಚಿತ್ರತಂಡ ಸ್ಪಷ್ಟನೆ

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ.

‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷ ಯಶ್‍ ಹುಟ್ಟುಹಬ್ಬದಂದು ಘೋಷಣೆಯಾಗಿತ್ತು. ಘೋಷಣೆಯ ದಿನವೇ, ಚಿತ್ರವನ್ನು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಕೆಲಸಗಳು ನಿಧಾನವಾದ ಕಾರಣ, ಏಪ್ರಿಲ್‍.10ರಂದು ಬಿಡುಗಡೆ ಮಾಡುವುದು ಕಷ್ಟದ ವಿಷಯವಾಗಿತ್ತು. ಆದರೆ, ಚಿತ್ರದ ಬಿಡುಗಡೆಯನ್ನು ಮುಂದೂಡುತ್ತಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಕೆಲವು ತಿಂಗಳುಗಳ ಹಿಂದೆ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಅದರ ಪ್ರಕಾರ 2026ರ ಮಾರ್ಚ್ 19ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಇದನ್ನು ಓದಿ; ಯಶ್‌ ನಟನೆಯ ಟಾಕ್ಸಿಕ್‌ ಬಿಡುಗಡೆಗೆ ಡೇಟ್‌ ಫಿಕ್ಸ್‌

ಆದರೆ, ಚಿತ್ರೀಕರಣ ಅಂದುಕೊಂಡಂತೆ ಸಾಗುತ್ತಿಲ್ಲ, ಚಿತ್ರೀಕರಣ ನಿಧಾನವಾಗಿ ಸಾಗುತ್ತಿರುವುದರಿಂದ ಚಿತ್ರವು ಅಂದುಕೊಂಡಂತೆ ಬಿಡುಗಡೆಯಾಗುತ್ತಿಲ್ಲ ಎಂಬ ಮಾತು ಸೋಷಿಯಲ್‍ ಮೀಡಿಯಾದಲ್ಲಿ ಕೇಳಿ ಬಂದಿತ್ತು. ಇದನ್ನು ನಿರಾಕರಿಸಿರುವ ಚಿತ್ರತಂಡ, ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ.

‘ಟಾಕ್ಸಿಕ್‍’ ಮೊದಲು ಪ್ಯಾನ್‍ ಇಂಡಿಯಾ ಚಿತ್ರವಾಗಿ ಶುರುವಾದರೂ ಈಗ ಪ್ಯಾನ್‍ ವರ್ಲ್ಡ್ ಚಿತ್ರವಾಗಿದೆ. ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ಯುವ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗುತ್ತಿದೆ. ಬಳಿಕ ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಅಂತಾರಾಷ್ಟ್ರೀಯ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ಮತ್ತು ಯಶ್‍ ಅವರ ಮಾನ್‍ಸ್ಟರ್‍ ಮೈಂಡ್‍ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಯಶ್‍, ರುಕ್ಮಿಣಿ ವಸಂತ್‍, ಕಿಯಾರಾ ಅಡ್ವಾಣಿ, ನಯನತಾರಾ, ಹಾಲಿವುಡ್‍ ನಟ ಕೈಲ್‍ ಪಾಲ್‍, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍, ಅನಿಲ್‍ ಕಪೂರ್, ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

30 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago