ಮನರಂಜನೆ

‘ಜಸ್ಟ್ ಮ್ಯಾರೀಡ್’ ತಂಡದಿಂದ ಟ್ರೇಲರ್ ಬಂತು; ಆ.22ರಂದು ಚಿತ್ರ ತೆರೆಗೆ

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್, ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿವೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಈ ಚಿತ್ರವನ್ನು ನಿರ್ಮಿಸಿದ್ದು, ಸಿ.ಆರ್.ಬಾಬಿ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಶೈನ್‍ ಶೆಟ್ಟಿ ಮತ್ತು ಅಂಕಿತಾ ಅಮರ್ ಜೊತೆಗೆ ಶ‍್ರುತಿ, ಮಾಳವಿಕಾ ಅವಿನಾಶ್‍, ಶ್ರೀಮಾನ್, ವಾಣಿ ಹರಿಕೃಷ್ಣ, ಅಭಿನವ್, ವೇದಿಕಾ, ದೇವರಾಜ್‍, ಅಚ್ಯುತ್‍ ಕುಮಾರ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶೈನ್‍ ಶೆಟ್ಟಿ, ‘ಆಗಷ್ಟೇ ‘ಕಾಂತಾರ’ ಚಿತ್ರ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ಅವರಿಂದ ನನಗೊಂದು ಕರೆ ಬಂತು. ನಾನೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದರು. ಆನಂತರ ಸಿ‌.ಆರ್.ಬಾಬಿ ಹಾಗೂ ಅಜನೀಶ್ ಅವರು ಈ ಚಿತ್ರದ ಕಥೆ ಹೇಳಿದರು. ನನಗಂತೂ ಕಥೆ ಬಹಳ ಇಷ್ಟವಾಯ್ತು. ಈ ಚಿತ್ರದಲ್ಲಿ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಇಂತಹ ಹಿರಿಯರೊಡನೆ ನಟಿಸಿದ್ದು ಬಹಳ ಖುಷಿಯಾಗಿದೆ’ ಎಂದರು ನಾಯಕ ಶೈನ್ ಶೆಟ್ಟಿ.

ಚಿಕ್ಕಂದಿನಿಂದಲೂ ತನಗೆ ನಟನೆಯಲ್ಲಿ ಆಸಕ್ತಿ ಎಂದ ಅಂಕಿತಾ, ‘ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ ಎಂಬ ಪ್ರಶ್ನೆ ಮೂಡುತ್ತಿತ್ತು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಅನುಭವಿ ಕಲಾವಿದರ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು‌. ಈ ಅವಕಾಶಕ್ಕಾಗಿ ಥ್ಯಾಂಕ್ಸ್’ ಎಂದರು.

ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸಂತೆ. ಅದು ‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ‘ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಸಮಯಕ್ಕೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ‌ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.

‘ಜಸ್ಟ್ ಮ್ಯಾರೀಡ್‍’ ನೋಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

11 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

11 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

11 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

12 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

13 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

21 hours ago