ಮನರಂಜನೆ

‘ಜಸ್ಟ್ ಮ್ಯಾರೀಡ್’ ತಂಡದಿಂದ ಟ್ರೇಲರ್ ಬಂತು; ಆ.22ರಂದು ಚಿತ್ರ ತೆರೆಗೆ

‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ‘ಜಸ್ಟ್ ಮ್ಯಾರೀಡ್’ ಚಿತ್ರವು ಆಗಸ್ಟ್ 22ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು, ರಿಷಬ್ ಶೆಟ್ಟಿ ಆನ್ ಲೈನ್ ಮೂಲಕ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಚಿತ್ರದ ಹಾಡುಗಳು ಮತ್ತು ಟ್ರೇಲರ್, ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿವೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಈ ಚಿತ್ರವನ್ನು ನಿರ್ಮಿಸಿದ್ದು, ಸಿ.ಆರ್.ಬಾಬಿ ಚಿತ್ರಕ್ಕೆ ಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಶೈನ್‍ ಶೆಟ್ಟಿ ಮತ್ತು ಅಂಕಿತಾ ಅಮರ್ ಜೊತೆಗೆ ಶ‍್ರುತಿ, ಮಾಳವಿಕಾ ಅವಿನಾಶ್‍, ಶ್ರೀಮಾನ್, ವಾಣಿ ಹರಿಕೃಷ್ಣ, ಅಭಿನವ್, ವೇದಿಕಾ, ದೇವರಾಜ್‍, ಅಚ್ಯುತ್‍ ಕುಮಾರ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಶೈನ್‍ ಶೆಟ್ಟಿ, ‘ಆಗಷ್ಟೇ ‘ಕಾಂತಾರ’ ಚಿತ್ರ ಬಿಡುಗಡೆಯಾಗಿತ್ತು. ಆ ಸಮಯದಲ್ಲಿ ಅಜನೀಶ್ ಅವರಿಂದ ನನಗೊಂದು ಕರೆ ಬಂತು. ನಾನೊಂದು ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನೀವು ನಾಯಕನಾಗಿ ನಟಿಸಬೇಕು ಎಂದರು. ಆನಂತರ ಸಿ‌.ಆರ್.ಬಾಬಿ ಹಾಗೂ ಅಜನೀಶ್ ಅವರು ಈ ಚಿತ್ರದ ಕಥೆ ಹೇಳಿದರು. ನನಗಂತೂ ಕಥೆ ಬಹಳ ಇಷ್ಟವಾಯ್ತು. ಈ ಚಿತ್ರದಲ್ಲಿ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇದೆ. ಇಂತಹ ಹಿರಿಯರೊಡನೆ ನಟಿಸಿದ್ದು ಬಹಳ ಖುಷಿಯಾಗಿದೆ’ ಎಂದರು ನಾಯಕ ಶೈನ್ ಶೆಟ್ಟಿ.

ಚಿಕ್ಕಂದಿನಿಂದಲೂ ತನಗೆ ನಟನೆಯಲ್ಲಿ ಆಸಕ್ತಿ ಎಂದ ಅಂಕಿತಾ, ‘ಟಿವಿ ಅಥವಾ ದೊಡ್ಡ ಪರದೆಯಲ್ಲಿ ತಾರೆಯರನ್ನು ನೋಡಿದಾಗ ಇವರೆಲ್ಲಾ ಇಷ್ಟು ಚೆನ್ನಾಗಿ ಹೇಗೆ ಅಭಿನಯಿಸುತ್ತಾರೆ ಎಂಬ ಪ್ರಶ್ನೆ ಮೂಡುತ್ತಿತ್ತು. ಇದು ನನ್ನ ಎರಡನೇ ಚಿತ್ರ. ಎರಡನೇ ಚಿತ್ರದಲ್ಲೇ ಇಂತಹ ಅನುಭವಿ ಕಲಾವಿದರ ಜೊತೆಗೆ ನಟಿಸುವ ಅವಕಾಶ ಒದಗಿ ಬಂತು‌. ಈ ಅವಕಾಶಕ್ಕಾಗಿ ಥ್ಯಾಂಕ್ಸ್’ ಎಂದರು.

ಬಾಬಿ ಅವರಿಗೆ ಚಿತ್ರ ನಿರ್ದೇಶನ ಮಾಡಬೇಕೆಂಬ ಹಲವು ವರ್ಷಗಳ ಕನಸಂತೆ. ಅದು ‘ಜಸ್ಟ್ ಮ್ಯಾರೀಡ್’ ಚಿತ್ರದ ಮೂಲಕ ನೆರವೇರಿದೆ ಎಂದು ಮಾತನಾಡಿದ ನಿರ್ದೇಶಕಿ ಸಿ.ಆರ್.ಬಾಬಿ, ‘ಬಹು ತಾರಾಬಳಗವಿರುವ ನಮ್ಮ ಚಿತ್ರದ ಚಿತ್ರೀಕರಣ ನಿಗದಿತ ಸಮಯಕ್ಕೂ ಮೂರು ದಿನಗಳ ಮುಂಚೆ ಪೂರ್ಣವಾಗಿದೆ. ಅದಕ್ಕೆ ಕಾರಣ‌ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರ. ಅದರಲ್ಲೂ ಛಾಯಾಗ್ರಾಹಕ ಪಿ.ಜಿ ಅವರು ಮುಖ್ಯ ಕಾರಣ. ನಿರ್ಮಾಪಕ ಅಜನೀಶ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ’ ಎಂದರು.

‘ಜಸ್ಟ್ ಮ್ಯಾರೀಡ್‍’ ನೋಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ತಮ್ಮ ವಿ.ಕೆ ಫಿಲಂಸ್ ಮೂಲಕ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

3 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

4 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

4 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

5 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

6 hours ago