ಮನರಂಜನೆ

ಲಿವ್‍-ಇನ್‍ ಸಂಬಂಧದ ಕುರಿತ ‘ಪ್ರೇಮಿಗಳ ಗಮನಕ್ಕೆ’ ಟ್ರೇಲರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥೆ ಇರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರವನ್ನು ಸಿಟಾಡಿಲ್ ಫಿಲಂಸ್ ಹಾಗೂ ಜೊಯಿಟಾ ಎಂಟರ್‌ಟೈನ್‌ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಜೊತೆಯಾಗಿ ನಿರ್ಮಿಸಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಶಶಿ ಮತ್ತು ಚಿರಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ : ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ

ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ ಎನ್ನುವ ನಿರ್ದೇಶಕ ವಿನ್ಸೆಂಟ್‍, ‘ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ ಮತ್ತು ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲವು ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಮನರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ’ ಎಂದರು.

ಶಶಿಕುಮಾರ್ ಅವರಿಗೆ ಇದು ಮೂರನೆಯ ಚಿತ್ರವಂತೆ. ಈಗಿನ ಕಾಲದ ತಲೆಮಾರಿನವರಿಗೆ ಈ ಕಥೆ ಹೆಚ್ಚು ಕನೆಕ್ಟ್ ಆಗುತ್ತೆ ಎಂದರು. ನಾಯಕಿ ಚಿರಶ್ರೀ ಈ ಚಿತ್ರದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ದರ್ಶಿನಿ ಎಂಬ ಪಾತ್ರ ಮಾಡಿರುವುದಾಗಿ ಹೇಳಿದರು. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

18 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

46 mins ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

1 hour ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

1 hour ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

3 hours ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

4 hours ago