ಮನರಂಜನೆ

ಲಿವ್‍-ಇನ್‍ ಸಂಬಂಧದ ಕುರಿತ ‘ಪ್ರೇಮಿಗಳ ಗಮನಕ್ಕೆ’ ಟ್ರೇಲರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥೆ ಇರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರವನ್ನು ಸಿಟಾಡಿಲ್ ಫಿಲಂಸ್ ಹಾಗೂ ಜೊಯಿಟಾ ಎಂಟರ್‌ಟೈನ್‌ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಜೊತೆಯಾಗಿ ನಿರ್ಮಿಸಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಶಶಿ ಮತ್ತು ಚಿರಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ : ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ

ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ ಎನ್ನುವ ನಿರ್ದೇಶಕ ವಿನ್ಸೆಂಟ್‍, ‘ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ ಮತ್ತು ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲವು ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಮನರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ’ ಎಂದರು.

ಶಶಿಕುಮಾರ್ ಅವರಿಗೆ ಇದು ಮೂರನೆಯ ಚಿತ್ರವಂತೆ. ಈಗಿನ ಕಾಲದ ತಲೆಮಾರಿನವರಿಗೆ ಈ ಕಥೆ ಹೆಚ್ಚು ಕನೆಕ್ಟ್ ಆಗುತ್ತೆ ಎಂದರು. ನಾಯಕಿ ಚಿರಶ್ರೀ ಈ ಚಿತ್ರದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ದರ್ಶಿನಿ ಎಂಬ ಪಾತ್ರ ಮಾಡಿರುವುದಾಗಿ ಹೇಳಿದರು. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಗಲಿದೆಯೇ ಈ ಅವಧಿಯ ಮೊದಲ ಬಂಡಾಯ?

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ  ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…

1 min ago

ತಮಿಳುನಾಡಿನಲ್ಲಿ ಕಮಾಲ್‌ ಮಾಡಿದ ಟಿವಿಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್‌ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…

14 mins ago

ಸಂಜೀವಿನಿ ಒಕ್ಕೂಟದಿಂದ ಜೇನು ಉತ್ಪಾದನೆ

ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…

20 mins ago

ತಮಿಳುನಾಡಿನಲ್ಲಿ ಡಿಎಂಕೆಗೆ ಆರಂಭಿಕ ಮುನ್ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…

51 mins ago

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ  ಮೈಸೂರು: ಸಣ್ಣ…

52 mins ago

ಹಳ್ಳದಲ್ಲಿ ಸಿಗುವ ಕಲುಷಿತ ನೀರೇ ಇವರಿಗೆ ಆಸರೆ!

ಮಂಜು ಕೋಟೆ ಎಚ್.ಡಿ.ಕೋಟೆ ತಾಲ್ಲೂಕಿನ ಗೂಳೂರು ಹಾಡಿ ಜನರು ಪ್ರತಿನಿತ್ಯ ಎದುರಿಸುತ್ತಿರುವ ದಯನೀಯ ಸ್ಥಿತಿಯಿದು ಎಚ್.ಡಿ.ಕೋಟೆ: ರಾಜ್ಯದಲ್ಲಿ ಯಾವುದೇ ಸರ್ಕಾರ…

1 hour ago