ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್-ಇನ್ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥೆ ಇರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರವನ್ನು ಸಿಟಾಡಿಲ್ ಫಿಲಂಸ್ ಹಾಗೂ ಜೊಯಿಟಾ ಎಂಟರ್ಟೈನ್ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಜೊತೆಯಾಗಿ ನಿರ್ಮಿಸಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ‘ಬಿಗ್ ಬಾಸ್’ ಖ್ಯಾತಿಯ ಶಶಿ ಮತ್ತು ಚಿರಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇದನ್ನು ಓದಿ : ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ
ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ ಎನ್ನುವ ನಿರ್ದೇಶಕ ವಿನ್ಸೆಂಟ್, ‘ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ ಮತ್ತು ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲವು ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಮನರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ’ ಎಂದರು.
ಶಶಿಕುಮಾರ್ ಅವರಿಗೆ ಇದು ಮೂರನೆಯ ಚಿತ್ರವಂತೆ. ಈಗಿನ ಕಾಲದ ತಲೆಮಾರಿನವರಿಗೆ ಈ ಕಥೆ ಹೆಚ್ಚು ಕನೆಕ್ಟ್ ಆಗುತ್ತೆ ಎಂದರು. ನಾಯಕಿ ಚಿರಶ್ರೀ ಈ ಚಿತ್ರದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ದರ್ಶಿನಿ ಎಂಬ ಪಾತ್ರ ಮಾಡಿರುವುದಾಗಿ ಹೇಳಿದರು. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಈ ಚಿತ್ರಕ್ಕಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…