ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್-ಇನ್ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ.
ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥೆ ಇರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರವನ್ನು ಸಿಟಾಡಿಲ್ ಫಿಲಂಸ್ ಹಾಗೂ ಜೊಯಿಟಾ ಎಂಟರ್ಟೈನ್ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಜೊತೆಯಾಗಿ ನಿರ್ಮಿಸಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ‘ಬಿಗ್ ಬಾಸ್’ ಖ್ಯಾತಿಯ ಶಶಿ ಮತ್ತು ಚಿರಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಇದನ್ನು ಓದಿ : ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ
ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ ಎನ್ನುವ ನಿರ್ದೇಶಕ ವಿನ್ಸೆಂಟ್, ‘ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ ಮತ್ತು ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲವು ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಮನರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ’ ಎಂದರು.
ಶಶಿಕುಮಾರ್ ಅವರಿಗೆ ಇದು ಮೂರನೆಯ ಚಿತ್ರವಂತೆ. ಈಗಿನ ಕಾಲದ ತಲೆಮಾರಿನವರಿಗೆ ಈ ಕಥೆ ಹೆಚ್ಚು ಕನೆಕ್ಟ್ ಆಗುತ್ತೆ ಎಂದರು. ನಾಯಕಿ ಚಿರಶ್ರೀ ಈ ಚಿತ್ರದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ದರ್ಶಿನಿ ಎಂಬ ಪಾತ್ರ ಮಾಡಿರುವುದಾಗಿ ಹೇಳಿದರು. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಈ ಚಿತ್ರಕ್ಕಿದೆ.
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…
ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…
ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್ನಂತೆ ಕಾಣುತ್ತಿದೆ. ಪೆಟ್ರೋಲ್ಗೆ ಶೇ.೨೦ ಮಿಶ್ರಣದ ಗುರಿ ಮತ್ತು…
ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…