ಮನರಂಜನೆ

ಲಿವ್‍-ಇನ್‍ ಸಂಬಂಧದ ಕುರಿತ ‘ಪ್ರೇಮಿಗಳ ಗಮನಕ್ಕೆ’ ಟ್ರೇಲರ್ ಬಿಡುಗಡೆ

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥೆ ಇರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರವನ್ನು ಸಿಟಾಡಿಲ್ ಫಿಲಂಸ್ ಹಾಗೂ ಜೊಯಿಟಾ ಎಂಟರ್‌ಟೈನ್‌ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಜೊತೆಯಾಗಿ ನಿರ್ಮಿಸಿದ್ದಾರೆ. ವಿನ್ಸೆಂಟ್ ಇನ್ಬರಾಜ್ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ‘ಬಿಗ್‍ ಬಾಸ್‍’ ಖ್ಯಾತಿಯ ಶಶಿ ಮತ್ತು ಚಿರಶ್ರೀ ನಾಯಕ-ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದನ್ನು ಓದಿ : ನಿಜಜೀವನದ ದಂಪತಿಯೇ ನಾಯಕ-ನಾಯಕಿ: ಶರಧಿ ಕಿರುಚಿತ್ರ ಬಿಡುಗಡೆ

ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜ ಘಟನೆ ಈ ಚಿತ್ರಕ್ಕೆ ಪ್ರೇರಣೆ ಎನ್ನುವ ನಿರ್ದೇಶಕ ವಿನ್ಸೆಂಟ್‍, ‘ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ ಮತ್ತು ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲವು ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಮನರಂಜನೆಯ ಜೊತೆಗೆ ಜಾಗೃತಿ ಮೂಡಿಸುವ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ’ ಎಂದರು.

ಶಶಿಕುಮಾರ್ ಅವರಿಗೆ ಇದು ಮೂರನೆಯ ಚಿತ್ರವಂತೆ. ಈಗಿನ ಕಾಲದ ತಲೆಮಾರಿನವರಿಗೆ ಈ ಕಥೆ ಹೆಚ್ಚು ಕನೆಕ್ಟ್ ಆಗುತ್ತೆ ಎಂದರು. ನಾಯಕಿ ಚಿರಶ್ರೀ ಈ ಚಿತ್ರದಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುವ ದರ್ಶಿನಿ ಎಂಬ ಪಾತ್ರ ಮಾಡಿರುವುದಾಗಿ ಹೇಳಿದರು. ಅರುಳ್ ಸೆಲ್ವನ್ ಅವರ ಛಾಯಾಗ್ರಹಣ, ಡೆನ್ನಿಸ್ ವಲ್ಲಭನ್ ಅವರ ಸಂಗೀತ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago