ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ.
ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ ನಿರ್ದೇಶಿಸಿ ನಟಿಸಿದ್ದಾರೆ. ದುನಿಯಾ ವಿಜಯ್ ಸಿನಿಮಾಗಳ ಹಿಟ್ ಲೀಸ್ಟ್ಗೆ ಮತ್ತೊಂದು ಸಿನಿಮಾ ಸೇರಿದೆ. ಆದರೆ ಸಿನಿಮಾ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮಾದಕ ವಸ್ತುಗಳ ಕುರಿತು ಬಿಂಬಿತವಾಗಿರುವ ಭೀಮಾ ಸಿನಿಮಾದಲ್ಲಿ ಅವುಗಳನ್ನು ತೊಡೆದು ಹಾಕಲು ಪೊಲೀಸರು ಹರಸಾಹಸ ಮಾಡುತ್ತಾರೆ. ರಿಲೀಸ್ ಆದ್ಮೇಲೆ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಅಷ್ಟೇ ಅಲ್ಲದೇ ಸಿನಿಮಾಗಳಲ್ಲಿ ಚೇಸ್ ಮಾಡುವ ರೀತಿ ಬೈಕ್ ಏರಿ ಚೇಸ್ ಮಾಡಿ ಮಾದಕ ಗಾಂಜ ಅಡ್ಡೆಗಳ ಬಳಿ ಹೋಗಿದ್ದರು.
ಇನ್ನೂ ಅಲ್ಲೇ, ಬಿದ್ದಿದ್ದ ಮಾದಕ ವಸ್ತುಗಳನ್ನು ತೋರಿಸಿ ರಿಪೋರ್ಟ್ ಮಾಡಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಹರಿಬಿಟ್ಟಿದ್ದರು. ಇನ್ನೂ ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ದುನಿಯಾ ವಿಜಯ್ ಆರೋಪಿಸಿದ್ದರು.
ಸದ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಲು ಸಿದ್ಧವಾಗಿದ್ದಾರೆ ಮತ್ತೊಂದು ಕಡೆ ದುನಿಯಾ ವಿಜಯ್ ಗೆ ನೊಟೀಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.
ಆಗಸ್ಟ್ 9 ಕ್ಕೆ ರಿಲೀಸ್ ಆಗಿರುವ ಭೀಮಾ ಚಿತ್ರ ಬಿಡುಗಡೆಯಾದ ವೇಳೆ ಚಾಮರಾಜನಗರದ ಕೆಲವು ಏರಿಯಾಗಳು ಮಾರುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ.
ಸಿಸಿಬಿ ಕಚೇರಿ ಬಳಿ ಡ್ರಗ್ ಮಾರಾಟದ ಬಗ್ಗೆ ಸಾಕ್ಷಿ ಇದೇ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಲು ಭೀಮ ನಾಯಕ ವಿಜಿಯನ್ನು ಕರೆಸಲು ಸಿಸಿಬಿ ಅಧಿಕಾರಿಗಳು ಚಿಂತನೆ ಮಾಡಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…