ಮನರಂಜನೆ

ನಟ ದುನಿಯಾ ವಿಜಯ್ ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ

ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್‌ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ.

ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ ನಿರ್ದೇಶಿಸಿ ನಟಿಸಿದ್ದಾರೆ. ದುನಿಯಾ ವಿಜಯ್ ಸಿನಿಮಾಗಳ ಹಿಟ್ ಲೀಸ್ಟ್ಗೆ ಮತ್ತೊಂದು ಸಿನಿಮಾ ಸೇರಿದೆ. ಆದರೆ ಸಿನಿಮಾ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮಾದಕ ವಸ್ತುಗಳ ಕುರಿತು ಬಿಂಬಿತವಾಗಿರುವ ಭೀಮಾ ಸಿನಿಮಾದಲ್ಲಿ ಅವುಗಳನ್ನು ತೊಡೆದು ಹಾಕಲು ಪೊಲೀಸರು ಹರಸಾಹಸ ಮಾಡುತ್ತಾರೆ. ರಿಲೀಸ್ ಆದ್ಮೇಲೆ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಅಷ್ಟೇ ಅಲ್ಲದೇ ಸಿನಿಮಾಗಳಲ್ಲಿ ಚೇಸ್ ಮಾಡುವ ರೀತಿ ಬೈಕ್ ಏರಿ ಚೇಸ್ ಮಾಡಿ ಮಾದಕ ಗಾಂಜ ಅಡ್ಡೆಗಳ ಬಳಿ ಹೋಗಿದ್ದರು.

ಇನ್ನೂ ಅಲ್ಲೇ, ಬಿದ್ದಿದ್ದ ಮಾದಕ ವಸ್ತುಗಳನ್ನು ತೋರಿಸಿ ರಿಪೋರ್ಟ್ ಮಾಡಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಹರಿಬಿಟ್ಟಿದ್ದರು. ಇನ್ನೂ ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ದುನಿಯಾ ವಿಜಯ್ ಆರೋಪಿಸಿದ್ದರು.

ಸದ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಲು ಸಿದ್ಧವಾಗಿದ್ದಾರೆ ಮತ್ತೊಂದು ಕಡೆ ದುನಿಯಾ ವಿಜಯ್ ಗೆ ನೊಟೀಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಆಗಸ್ಟ್ 9 ಕ್ಕೆ ರಿಲೀಸ್ ಆಗಿರುವ ಭೀಮಾ ಚಿತ್ರ ಬಿಡುಗಡೆಯಾದ ವೇಳೆ ಚಾಮರಾಜನಗರದ ಕೆಲವು ಏರಿಯಾಗಳು ಮಾರುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ.

ಸಿಸಿಬಿ ಕಚೇರಿ ಬಳಿ ಡ್ರಗ್ ಮಾರಾಟದ ಬಗ್ಗೆ ಸಾಕ್ಷಿ ಇದೇ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಲು ಭೀಮ ನಾಯಕ ವಿಜಿಯನ್ನು ಕರೆಸಲು ಸಿಸಿಬಿ ಅಧಿಕಾರಿಗಳು ಚಿಂತನೆ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago