ಮನರಂಜನೆ

ನಟ ದುನಿಯಾ ವಿಜಯ್ ಗೆ ಸಂಕಷ್ಟ: ಭೀಮನಿಗೆ ಸಿಸಿಬಿ ನೋಟಿಸ್ ಸಾಧ್ಯತೆ

ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್‌ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ.

ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ ನಿರ್ದೇಶಿಸಿ ನಟಿಸಿದ್ದಾರೆ. ದುನಿಯಾ ವಿಜಯ್ ಸಿನಿಮಾಗಳ ಹಿಟ್ ಲೀಸ್ಟ್ಗೆ ಮತ್ತೊಂದು ಸಿನಿಮಾ ಸೇರಿದೆ. ಆದರೆ ಸಿನಿಮಾ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಮಾದಕ ವಸ್ತುಗಳ ಕುರಿತು ಬಿಂಬಿತವಾಗಿರುವ ಭೀಮಾ ಸಿನಿಮಾದಲ್ಲಿ ಅವುಗಳನ್ನು ತೊಡೆದು ಹಾಕಲು ಪೊಲೀಸರು ಹರಸಾಹಸ ಮಾಡುತ್ತಾರೆ. ರಿಲೀಸ್ ಆದ್ಮೇಲೆ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಅಷ್ಟೇ ಅಲ್ಲದೇ ಸಿನಿಮಾಗಳಲ್ಲಿ ಚೇಸ್ ಮಾಡುವ ರೀತಿ ಬೈಕ್ ಏರಿ ಚೇಸ್ ಮಾಡಿ ಮಾದಕ ಗಾಂಜ ಅಡ್ಡೆಗಳ ಬಳಿ ಹೋಗಿದ್ದರು.

ಇನ್ನೂ ಅಲ್ಲೇ, ಬಿದ್ದಿದ್ದ ಮಾದಕ ವಸ್ತುಗಳನ್ನು ತೋರಿಸಿ ರಿಪೋರ್ಟ್ ಮಾಡಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಹರಿಬಿಟ್ಟಿದ್ದರು. ಇನ್ನೂ ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ದುನಿಯಾ ವಿಜಯ್ ಆರೋಪಿಸಿದ್ದರು.

ಸದ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಲು ಸಿದ್ಧವಾಗಿದ್ದಾರೆ ಮತ್ತೊಂದು ಕಡೆ ದುನಿಯಾ ವಿಜಯ್ ಗೆ ನೊಟೀಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.

ಆಗಸ್ಟ್ 9 ಕ್ಕೆ ರಿಲೀಸ್ ಆಗಿರುವ ಭೀಮಾ ಚಿತ್ರ ಬಿಡುಗಡೆಯಾದ ವೇಳೆ ಚಾಮರಾಜನಗರದ ಕೆಲವು ಏರಿಯಾಗಳು ಮಾರುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ.

ಸಿಸಿಬಿ ಕಚೇರಿ ಬಳಿ ಡ್ರಗ್ ಮಾರಾಟದ ಬಗ್ಗೆ ಸಾಕ್ಷಿ ಇದೇ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಲು ಭೀಮ ನಾಯಕ ವಿಜಿಯನ್ನು ಕರೆಸಲು ಸಿಸಿಬಿ ಅಧಿಕಾರಿಗಳು ಚಿಂತನೆ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago