ಮೈಸೂರು: ಕನ್ನಡ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ ಎಂಬ ಕೂಗಿನ ನಡುವೇ, ಇತ್ತೀಚೆಗೆ ತೆರೆ ಕಂಡ ದುನಿಯಾ ವಿಜಯ್ ನಟನೆಯ ಭೀಮ ಸಿನಿಮಾ ಚಿತ್ರಮಂದಿರಕ್ಕೆ ಜನ ಕರೆತರುವಲ್ಲಿ ಯಶಸ್ವಿ ಕಾಣುತ್ತಿದೆ.
ಚಂದನವನದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿರುವ ಭೀಮ ಸಿನಿಮಾವನ್ನು ವಿಜಯ್ ನಿರ್ದೇಶಿಸಿ ನಟಿಸಿದ್ದಾರೆ. ದುನಿಯಾ ವಿಜಯ್ ಸಿನಿಮಾಗಳ ಹಿಟ್ ಲೀಸ್ಟ್ಗೆ ಮತ್ತೊಂದು ಸಿನಿಮಾ ಸೇರಿದೆ. ಆದರೆ ಸಿನಿಮಾ ಪ್ರಮೋಷನ್ ನಟ ದುನಿಯಾ ವಿಜಯ್ ಗೆ ಕಂಟಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಮಾದಕ ವಸ್ತುಗಳ ಕುರಿತು ಬಿಂಬಿತವಾಗಿರುವ ಭೀಮಾ ಸಿನಿಮಾದಲ್ಲಿ ಅವುಗಳನ್ನು ತೊಡೆದು ಹಾಕಲು ಪೊಲೀಸರು ಹರಸಾಹಸ ಮಾಡುತ್ತಾರೆ. ರಿಲೀಸ್ ಆದ್ಮೇಲೆ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಅಷ್ಟೇ ಅಲ್ಲದೇ ಸಿನಿಮಾಗಳಲ್ಲಿ ಚೇಸ್ ಮಾಡುವ ರೀತಿ ಬೈಕ್ ಏರಿ ಚೇಸ್ ಮಾಡಿ ಮಾದಕ ಗಾಂಜ ಅಡ್ಡೆಗಳ ಬಳಿ ಹೋಗಿದ್ದರು.
ಇನ್ನೂ ಅಲ್ಲೇ, ಬಿದ್ದಿದ್ದ ಮಾದಕ ವಸ್ತುಗಳನ್ನು ತೋರಿಸಿ ರಿಪೋರ್ಟ್ ಮಾಡಿ ಅದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅದನ್ನು ಹರಿಬಿಟ್ಟಿದ್ದರು. ಇನ್ನೂ ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ದುನಿಯಾ ವಿಜಯ್ ಆರೋಪಿಸಿದ್ದರು.
ಸದ್ಯ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಅಧಿಕಾರಿಗಳು ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಬಳಸುವವರನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಲು ಸಿದ್ಧವಾಗಿದ್ದಾರೆ ಮತ್ತೊಂದು ಕಡೆ ದುನಿಯಾ ವಿಜಯ್ ಗೆ ನೊಟೀಸ್ ಕೊಟ್ಟು ಕರೆಸಿ ವಿಚಾರಣೆ ನಡೆಸಲು ಪ್ಲಾನ್ ಮಾಡಿಕೊಂಡಿದ್ದಾರೆ.
ಆಗಸ್ಟ್ 9 ಕ್ಕೆ ರಿಲೀಸ್ ಆಗಿರುವ ಭೀಮಾ ಚಿತ್ರ ಬಿಡುಗಡೆಯಾದ ವೇಳೆ ಚಾಮರಾಜನಗರದ ಕೆಲವು ಏರಿಯಾಗಳು ಮಾರುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ.
ಸಿಸಿಬಿ ಕಚೇರಿ ಬಳಿ ಡ್ರಗ್ ಮಾರಾಟದ ಬಗ್ಗೆ ಸಾಕ್ಷಿ ಇದೇ ಎಂದು ದುನಿಯಾ ವಿಜಯ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಲು ಭೀಮ ನಾಯಕ ವಿಜಿಯನ್ನು ಕರೆಸಲು ಸಿಸಿಬಿ ಅಧಿಕಾರಿಗಳು ಚಿಂತನೆ ಮಾಡಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…