ಮನರಂಜನೆ

ತುಳು ಭಾಷೆಯ ‘ದಸ್ಕತ್‍’ ಕನ್ನಡಕ್ಕೆ ಡಬ್‍ ಆಯ್ತು: ಮೇ.09ಕ್ಕೆ ಬಿಡುಗಡೆ

ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್‍ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.

‘ದಸ್ಕತ್‍’ ಚಿತ್ರವನ್ನು ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ದೀಕ್ಷಿತ್‍ ಕೆ. ಅಂದಿನ್ಜೆ, ಮೋಹನ್‍ ಶೇಣಿ, ನೀರಜ್‍ ಕುಂದರ್ಪ, ಮಿಥುನ್‍ ರಾಜ್‍, ಯುವ ಶೆಟ್ಟಿ, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ ಮುಂತಾದವರು ನಟಿಸಿದ್ದು, ಅನೀಶ್‍ ಪೂಜಾರಿ ವೇಣೂರು ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ‘ದಸ್ಕತ್ ಅಂದರೆ ಸಿಗ್ನೇಚರ್ ಅಥವಾ ಸಹಿ ಎಂದರ್ಥ. ಒಂದು ಹಳ್ಳಿಯಲ್ಲಿ ಜನ ಸಹಿಗಾಗಿ ಎಷ್ಟು ಕಷ್ಟ ಪಡ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಒಂದು ಸಹಿಯಿಂದ ಏನೆಲ್ಲಾ ಅವಾಂತರ ಸೃಷ್ಟಿಯಾಗುತ್ತದೆ ಎಂದು ಹೇಳಲಾಗಿದೆ. ಶ್ರೀಮಂತರು, ಬಡವರು ಹಾಗೂ ಅಧಿಕಾರಿಗಳ ನಡುವಿನ ಗೊಂದಲ ಮತ್ತು ಸಂಘರ್ಷ ಹೇಗೆಲ್ಲಾ ಸಾಗುತ್ತದೆ ಎಂಬುದನ್ನು ಬಹಳ ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇಂತಹ ಘಟನೆಗಳು ಪ್ರತಿಯೊಬ್ಬರ ಬದುಕಿನಲ್ಲಿ ನಡೆಯುವಂತಹ ಸಾಧ್ಯತೆ ಇದ್ದೇ ಇರುತ್ತದೆ. ಕರಾವಳಿ ಭಾಗದ ಸುತ್ತ ಚಿತ್ರೀಕರಿಸಿರುವ ಈ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ 70 ದಿನವನ್ನು ಪೂರೈಸಿದೆ. ಹಾಗೆಯೇ ದುಬೈ, ಮಸ್ಕತ್‍, ಕೆನಡಾ, ನೈಜೀರಿಯಾ ಸೇರದಂತೆ ಬಬೇರೆ ದೇಶಗಳಲ್ಲೂ ಚಿತ್ರ ಪ್ರದರ್ಶನವಾಗಿದೆ’ ಎಂದರು.

ಈ ಚಿತ್ರವನ್ನ ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿರುವುದು ಜಗದೀಶ್ ಎನ್. ಅರೇಬನ್ನಿಮಂಗಲ, ಮಾತನಾಡಿ, ‘ನಾನು ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಗ್ರಾಮದ ಕಷ್ಟ ಸುಖಗಳನ್ನ ಚೆನ್ನಾಗಿ ತಿಳಿದುಕೊಂಡು ಪರಿಹಾರ ಕೂಡ ಮಾಡಿದ್ದೇನೆ. ಈ ಚಿತ್ರ ನೋಡಿದೆ. ನನಗೆ ತುಳು ಬರದಿದ್ದರೂ ಭಾವನೆಗಳು ತುಂಬಾ ಇಷ್ಟವಾಯಿತು. ಗ್ರಾ ಪಂ. ಅಧಿಕಾರಿಯಿಂದ ಆ ಹಳ್ಳಿಯ ಮುಗ್ಧ ಜನ ಹೇಗೆಲ್ಲಾ ಕಷ್ಟ ಪಡುತ್ತಿದ್ದಾರೆ ಎಂಬುವುದನ್ನು ಬಹಳ ಸೊಗಸಾಗಿ ತೋರಿಸಿದ್ದಾರೆ. ಹಾಗಾಗಿ, ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು

‘ದಸ್ಕತ್‍’ ಚಿತ್ರಕ್ಕೆ ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣ, ಸಮರ್ಥನ್ ಎಸ್. ರಾವ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

4 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

4 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

5 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

5 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

5 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

6 hours ago