ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.
‘ದಸ್ಕತ್’ ಚಿತ್ರವನ್ನು ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ದೀಕ್ಷಿತ್ ಕೆ. ಅಂದಿನ್ಜೆ, ಮೋಹನ್ ಶೇಣಿ, ನೀರಜ್ ಕುಂದರ್ಪ, ಮಿಥುನ್ ರಾಜ್, ಯುವ ಶೆಟ್ಟಿ, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ ಮುಂತಾದವರು ನಟಿಸಿದ್ದು, ಅನೀಶ್ ಪೂಜಾರಿ ವೇಣೂರು ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ‘ದಸ್ಕತ್ ಅಂದರೆ ಸಿಗ್ನೇಚರ್ ಅಥವಾ ಸಹಿ ಎಂದರ್ಥ. ಒಂದು ಹಳ್ಳಿಯಲ್ಲಿ ಜನ ಸಹಿಗಾಗಿ ಎಷ್ಟು ಕಷ್ಟ ಪಡ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಒಂದು ಸಹಿಯಿಂದ ಏನೆಲ್ಲಾ ಅವಾಂತರ ಸೃಷ್ಟಿಯಾಗುತ್ತದೆ ಎಂದು ಹೇಳಲಾಗಿದೆ. ಶ್ರೀಮಂತರು, ಬಡವರು ಹಾಗೂ ಅಧಿಕಾರಿಗಳ ನಡುವಿನ ಗೊಂದಲ ಮತ್ತು ಸಂಘರ್ಷ ಹೇಗೆಲ್ಲಾ ಸಾಗುತ್ತದೆ ಎಂಬುದನ್ನು ಬಹಳ ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇಂತಹ ಘಟನೆಗಳು ಪ್ರತಿಯೊಬ್ಬರ ಬದುಕಿನಲ್ಲಿ ನಡೆಯುವಂತಹ ಸಾಧ್ಯತೆ ಇದ್ದೇ ಇರುತ್ತದೆ. ಕರಾವಳಿ ಭಾಗದ ಸುತ್ತ ಚಿತ್ರೀಕರಿಸಿರುವ ಈ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ 70 ದಿನವನ್ನು ಪೂರೈಸಿದೆ. ಹಾಗೆಯೇ ದುಬೈ, ಮಸ್ಕತ್, ಕೆನಡಾ, ನೈಜೀರಿಯಾ ಸೇರದಂತೆ ಬಬೇರೆ ದೇಶಗಳಲ್ಲೂ ಚಿತ್ರ ಪ್ರದರ್ಶನವಾಗಿದೆ’ ಎಂದರು.
ಈ ಚಿತ್ರವನ್ನ ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿರುವುದು ಜಗದೀಶ್ ಎನ್. ಅರೇಬನ್ನಿಮಂಗಲ, ಮಾತನಾಡಿ, ‘ನಾನು ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಗ್ರಾಮದ ಕಷ್ಟ ಸುಖಗಳನ್ನ ಚೆನ್ನಾಗಿ ತಿಳಿದುಕೊಂಡು ಪರಿಹಾರ ಕೂಡ ಮಾಡಿದ್ದೇನೆ. ಈ ಚಿತ್ರ ನೋಡಿದೆ. ನನಗೆ ತುಳು ಬರದಿದ್ದರೂ ಭಾವನೆಗಳು ತುಂಬಾ ಇಷ್ಟವಾಯಿತು. ಗ್ರಾ ಪಂ. ಅಧಿಕಾರಿಯಿಂದ ಆ ಹಳ್ಳಿಯ ಮುಗ್ಧ ಜನ ಹೇಗೆಲ್ಲಾ ಕಷ್ಟ ಪಡುತ್ತಿದ್ದಾರೆ ಎಂಬುವುದನ್ನು ಬಹಳ ಸೊಗಸಾಗಿ ತೋರಿಸಿದ್ದಾರೆ. ಹಾಗಾಗಿ, ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು
‘ದಸ್ಕತ್’ ಚಿತ್ರಕ್ಕೆ ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣ, ಸಮರ್ಥನ್ ಎಸ್. ರಾವ್ ಸಂಗೀತವಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…