ಮನರಂಜನೆ

ತುಳು ಭಾಷೆಯ ‘ದಸ್ಕತ್‍’ ಕನ್ನಡಕ್ಕೆ ಡಬ್‍ ಆಯ್ತು: ಮೇ.09ಕ್ಕೆ ಬಿಡುಗಡೆ

ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್‍ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ನಡೆಸಿದೆ.

‘ದಸ್ಕತ್‍’ ಚಿತ್ರವನ್ನು ರಾಘವೇಂದ್ರ ಕುಡ್ವ ನಿರ್ಮಿಸಿದ್ದು, ದೀಕ್ಷಿತ್‍ ಕೆ. ಅಂದಿನ್ಜೆ, ಮೋಹನ್‍ ಶೇಣಿ, ನೀರಜ್‍ ಕುಂದರ್ಪ, ಮಿಥುನ್‍ ರಾಜ್‍, ಯುವ ಶೆಟ್ಟಿ, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ ಮುಂತಾದವರು ನಟಿಸಿದ್ದು, ಅನೀಶ್‍ ಪೂಜಾರಿ ವೇಣೂರು ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ‘ದಸ್ಕತ್ ಅಂದರೆ ಸಿಗ್ನೇಚರ್ ಅಥವಾ ಸಹಿ ಎಂದರ್ಥ. ಒಂದು ಹಳ್ಳಿಯಲ್ಲಿ ಜನ ಸಹಿಗಾಗಿ ಎಷ್ಟು ಕಷ್ಟ ಪಡ್ತಾರೆ ಎಂಬುದನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ಒಂದು ಸಹಿಯಿಂದ ಏನೆಲ್ಲಾ ಅವಾಂತರ ಸೃಷ್ಟಿಯಾಗುತ್ತದೆ ಎಂದು ಹೇಳಲಾಗಿದೆ. ಶ್ರೀಮಂತರು, ಬಡವರು ಹಾಗೂ ಅಧಿಕಾರಿಗಳ ನಡುವಿನ ಗೊಂದಲ ಮತ್ತು ಸಂಘರ್ಷ ಹೇಗೆಲ್ಲಾ ಸಾಗುತ್ತದೆ ಎಂಬುದನ್ನು ಬಹಳ ಸೂಕ್ಷ್ಮವಾಗಿ ಹೇಳುವ ಪ್ರಯತ್ನ ಮಾಡಿದ್ದೇವೆ. ಇಂತಹ ಘಟನೆಗಳು ಪ್ರತಿಯೊಬ್ಬರ ಬದುಕಿನಲ್ಲಿ ನಡೆಯುವಂತಹ ಸಾಧ್ಯತೆ ಇದ್ದೇ ಇರುತ್ತದೆ. ಕರಾವಳಿ ಭಾಗದ ಸುತ್ತ ಚಿತ್ರೀಕರಿಸಿರುವ ಈ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ 70 ದಿನವನ್ನು ಪೂರೈಸಿದೆ. ಹಾಗೆಯೇ ದುಬೈ, ಮಸ್ಕತ್‍, ಕೆನಡಾ, ನೈಜೀರಿಯಾ ಸೇರದಂತೆ ಬಬೇರೆ ದೇಶಗಳಲ್ಲೂ ಚಿತ್ರ ಪ್ರದರ್ಶನವಾಗಿದೆ’ ಎಂದರು.

ಈ ಚಿತ್ರವನ್ನ ಕನ್ನಡದಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿರುವುದು ಜಗದೀಶ್ ಎನ್. ಅರೇಬನ್ನಿಮಂಗಲ, ಮಾತನಾಡಿ, ‘ನಾನು ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಗ್ರಾಮದ ಕಷ್ಟ ಸುಖಗಳನ್ನ ಚೆನ್ನಾಗಿ ತಿಳಿದುಕೊಂಡು ಪರಿಹಾರ ಕೂಡ ಮಾಡಿದ್ದೇನೆ. ಈ ಚಿತ್ರ ನೋಡಿದೆ. ನನಗೆ ತುಳು ಬರದಿದ್ದರೂ ಭಾವನೆಗಳು ತುಂಬಾ ಇಷ್ಟವಾಯಿತು. ಗ್ರಾ ಪಂ. ಅಧಿಕಾರಿಯಿಂದ ಆ ಹಳ್ಳಿಯ ಮುಗ್ಧ ಜನ ಹೇಗೆಲ್ಲಾ ಕಷ್ಟ ಪಡುತ್ತಿದ್ದಾರೆ ಎಂಬುವುದನ್ನು ಬಹಳ ಸೊಗಸಾಗಿ ತೋರಿಸಿದ್ದಾರೆ. ಹಾಗಾಗಿ, ಈ ಚಿತ್ರವನ್ನು ಕನ್ನಡದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ’ ಎಂದರು

‘ದಸ್ಕತ್‍’ ಚಿತ್ರಕ್ಕೆ ಸಂತೋಷ್ ಆಚಾರ್ಯ ಗುಂಪಲಾಜೆ ಛಾಯಾಗ್ರಹಣ, ಸಮರ್ಥನ್ ಎಸ್. ರಾವ್ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago