ಮನರಂಜನೆ

‘ರುದ್ರ ಗರುಡ ಪುರಾಣ’ಕ್ಕೆ ಎರಡು ಉಪಕಥೆಗಳೂ ಸ್ಫೂರ್ತಿ…

ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈಗ ಚಿತ್ರದ ಚಿತ್ರೀಕರಣ ಮುಗಿದಿರುವುದಷ್ಟೇ ಅಲ್ಲ, ಇತ್ತೀಚೆಗೆ ಟೀಸರ್‍ ಸಹ ಬಿಡುಗಡೆಯಾಗಿದೆ. ಚಿತ್ರವನ್ನು ಆದಷ್ಟು ಬೇಗ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

ಇತ್ತೀಚೆಗೆ, ನಟ ಶಿವರಾಜಕುಮಾರ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಇನ್ನು, ನಿರ್ದೇಶಕ ಜೇಕಬ್ ವರ್ಗೀಸ್‍ ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಗರುಡ ಪುರಾಣ ಗೊತ್ತು, ಇದೇನಿದು ‘ರುದ್ರ ಗರುಡ ಪುರಾಣ’ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ‘ಗರುಡ ಪುರಾಣ’ದಲ್ಲಿ ಒಂದಿಷ್ಟು ಸಮಸ್ಯೆಗಳಿಗೆ ಉತ್ತರವಿದೆಯಂತೆ. ರುದ್ರ ಎಂಬ ಪೊಲೀಸ್‍ ಅಧಿಕಾರಿ ಈ ಗರುಡ ಪುರಾಣವನ್ನು ಇಟ್ಟುಕೊಂಡು ಹೇಗೆ ಸಮಾಜದ ಓರೆಕೋರೆಗಳನ್ನು ತಿದ್ದುತ್ತಾನೆ ಎಂಬುದೇ ಚಿತ್ರದ ಕಥೆ.

ಈ ಚಿತ್ರದ ಕುರಿತು ಮಾತನಾಡುವ ರಿಷಿ, ‘ನಮ್ಮ ಸುತ್ತಮುತ್ತ ನಡೆಯುತ್ತಿರುವ ಕಳಪೆ ಕಾಮಗಾರಿ, ಭ್ರಷ್ಟಾಷಾರ ಅಥವಾ ಹೆಣ್ಮಕ್ಕಳ ಮೇಲೆ ಆಗುತ್ತಿರುವ ಅತ್ಯಾಚಾರ ಮುಂತಾದ ಹಲವು ಕಹಿ ಘಟನೆಗಳನ್ನು ಪ್ರಜೆಗಳಾಗಿ ನಾವು ಎದುರಿಸುವುದು ಹೇಗೆ ಎಂಬ ಚರ್ಚೆ ನಡೆಯುತ್ತಿರುತ್ತದೆ. ಗರುಡ ಪುರಾಣದಲ್ಲಿ ಈ ತರಹದ ಘಟನೆಗಳಾದಾಗ, ಏನು ಮಾಡಬೇಕು ಎಂಬ ಕುರಿತು ಒಂದಿಷ್ಟು ಸೂಚನೆಗಳಿವೆ. ಈ ವಿಷಯವನ್ನು ಮೂಲವಾಗಿಟ್ಟುಕೊಂಡು ಕಥೆ ಮಾಡಲಾಗಿದೆ. ನಾನು ಈ ಚಿತ್ರದಲ್ಲಿ ರುದ್ರ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರ ಮಾಡುತ್ತಿದ್ದೇನೆ. ರುದ್ರನ ಕೈಗೆ ಗರುಡ ಪುರಾಣ ಸಿಕ್ಕಾಗ ಏನಾಗುತ್ತದೆ ಎಂಬುದನ್ನು ಚಿತ್ರ ನೋಡಬೇಕು. ಈ ಪಾತ್ರ ಮಾಡಿದ್ದು ನಿಜಕ್ಕೂ ಖುಷಿಕೊಟ್ಟಿತು. ಹೆಸರಿಗೆ ಯಾವ ಫೋರ್ಸ್ ಇದೆಯೋ, ಪಾತ್ರಕ್ಕೂ ಅಷ್ಟೇ ಫೋರ್ಸ್ ಇದೆ’ ಎಂದರು.

ಇನ್ನು, ನಿರ್ದೇಶಕ ನಂದೀಶ್‍ ಈ ಚಿತ್ರವನ್ನು ಎರಡು ಉಪಕಥೆಗಳನ್ನಿಟ್ಟುಕೊಂಡು ಕಥೆ ಮಾಡಿದ್ದಾರೆ. ಮೊದಲನೆಯದು, 1954ರಲ್ಲಿ ಅಮೇರಿಕಾದಲ್ಲಿ ವಿಮಾನವೊಂದು ಮಾರ್ಗ ಮಧ್ಯೆ ನಿಗೂಢವಾಗಿ ಕಳೆದು ಹೋಗಿರುತ್ತದೆ. ಅದು ಎಲ್ಲಿ ಮಾಯವಾಗಿದೆ ಎಂದು ಯಾರಿಗೂ ಗೊತ್ತಿರುವುದಿಲ್ಲ. ಇದಾಗಿ 30 ವರ್ಷಗಳ ನಂತರ ಆ ವಿಮಾನ ವಾಪಸ್ಸು ಬರುತ್ತದೆ. ಈ ಕಥೆ ಚಿತ್ರಕ್ಕೆ ಸ್ಫೂರ್ತಿಯಂತೆ.

ಇದರ ಜೊತೆಗೆ, ‘ಒಬ್ಬ ರಾಜ ಇಡೀ ಭೂಮಂಡಲನೇ ಗೆಲ್ಲಬೇಕು ಅಂತ ಆಸೆಯಿಂದ ತನ್ನ‌ ಪಕ್ಕದ ದೇಶದ ಮೇಲೆ ಯುದ್ದಕ್ಕೆ ಹೋಗಿ‌ ಲಕ್ಷಾಂತರ ಜನರನ್ನು ಕೊಂದು ಜಯ‌ ಸಾಧಿಸಿರುತ್ತಾನೆ.‌ ಯುದ್ದ ಮುಗಿದ ಮೇಲೆ‌ ರಣರಂಗಕ್ಕೆ‌ ಹೋಗುತ್ತಾನೆ. ಅಲ್ಲಿ ಸಾಲುಸಾಲು ಹೆಣದ ರಾಶಿಗಳಿರುತ್ತಿದೆ.‌ ಸತ್ತಿದ್ದ ಸೈನಿಕನೊಬ್ಬನ ಮಾಂಸವನ್ನು ಇನ್ನೊಬ್ಬ ಮನುಷ್ಯ ತಿನ್ನುತ್ತಿರುತ್ತಾನೆ.‌ ಆ ಸಮಯಕ್ಕೆ‌ ರಾಜ ಅಲ್ಲಿಗೆ ಬರುತ್ತಾನೆ‌. ಆ‌ ಮನುಷ್ಯ ರಾಜನನ್ನು ಕುರಿತು, ‘ಕ್ಷಮಿಸು ರಾಜ, ನಾನು ನಿನ್ನ ಆಹಾರವನ್ನು ‌ತಿನ್ನುತ್ತಿದ್ದೇನೆ’ ಎನ್ನುತ್ತಾನೆ. ಆಗ ರಾಜ, ‘ನಾನು ನಿನ್ನ ಹಾಗೆ ನರಭಕ್ಷಕ ಅಲ್ಲ‌’ ಏನುತ್ತಾನೆ.‌ ಆಗ ಆ ಮನುಷ್ಯ, ‘ಹಾಗಾದರೆ ಇಷ್ಟು ಜನರನ್ನು ಏಕೆ‌ ಸಾಯಿಸಿದಿಯಾ’ ಎಂದು ರಾಜನನ್ನು ಕೇಳುತ್ತಾನೆ. ಈ ಎರಡೂ ಘಟನೆಗಳನ್ನು ಇಟ್ಟುಕೊಂಡು ಈ ಕಥೆ ಮಾಡಿದ್ದೇನೆ’ ಎಂದರು ನಂದೀಶ್‍.

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಂದೀಶ್‍ಗೆ ನಾಯಕಿಯಾಗಿ ಪ್ರಿಯಾಂಕಾ ಕುಮಾರ್‌ ಇದ್ದಾರೆ. ಮಿಕ್ಕಂತೆ ಹಿರಿಯ ನಟ ವಿನೋದ್‍ ಆಳ್ವ, ‘ಸಿದ್ಲಿಂಗು’ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಕೆಪಿ ಸಂಗೀತ ಸಂಯೋಜಿಸಿದ್ದು, ರಘು ನಿಡುವಳ್ಳಿ ಸಂಗಭಾಷಣೆ ಮತ್ತು ಸಂದೀಪ್‍ ಕುಮಾರ್‍ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

4 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

5 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

5 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

6 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

6 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

6 hours ago