ಮನರಂಜನೆ

ARM ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್: ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆ

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌, ಅಭಿನಯದ “ಎಆರ್‌ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಸೆಪ್ಟೆಂಬರ್‌ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ.

ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್‌ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಈ ಚಿತ್ರಕ್ಕಿದೆ.

ದಿಬು ನೈನನ್ ಥಾಮಸ್‌ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್‌ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ, ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.

ಸುಜಿತ್ ನಂಬಿಯಾರ್ಚಿ ಕಥೆ ಬರೆದಿದ್ದಾರೆ. ಅವರ ಜೊತೆಗೆ ದೀಪು ಪ್ರದೀಪ್ ಸಾಥ್‌ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್‌ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

1 hour ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

2 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

2 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

2 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

5 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

5 hours ago