ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್, ಅಭಿನಯದ “ಎಆರ್ಎಂ” ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಮೊನ್ನೆ ತಾನೆ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ನೋಡಿ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ “ಎಆರ್ಎಂ” ಸಿನಿಮಾ ಸೆಪ್ಟೆಂಬರ್ 12ರಂದು ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಬಿಡುಗಡೆ ಮಾಡಲಿದೆ.
ಮ್ಯಾಜಿಕ್ ಫ್ರೇಮ್ಸ್ ಬ್ಯಾನರ್ ಅಡಿಯಲ್ಲಿ ಲಿಸ್ಟಿನ್ ಸ್ಟೀಫನ್ ಮತ್ತು UGM ಮೂವೀಸ್ ಅಡಿಯಲ್ಲಿ ಡಾ. ಜಕರಿಯಾ ಥಾಮಸ್ ಸಿನಿಮಾವನ್ನು ನಿರ್ಮಿಸಿದ್ದಾರೆ. ಮಲಯಾಳಂ ಚಿತ್ರರಂಗದಿಂದ ಬಾಲಿವುಡ್ನಲ್ಲೂ ಛಾಪು ಮೂಡಿಸಿರುವ ಜೋಮನ್ ಟಿ. ಜಾನ್ ಅವರ ಛಾಯಾಗ್ರಹಣ ಮತ್ತು ಶಮೀರ್ ಮುಹಮ್ಮದ್ ಅವರ ಸಂಕಲನ ಈ ಚಿತ್ರಕ್ಕಿದೆ.
ದಿಬು ನೈನನ್ ಥಾಮಸ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕನಾ ಮತ್ತು ನಟ ಸಿದ್ಧಾರ್ಥ್ ಅವರ ಚಿತ್ತಾ ಸಿನಿಮಾಗಳಿಗೂ ಸಂಗೀತ ನೀಡಿದ್ದರು. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿರುವ ನಟಿಯರಾದ ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ, ಬೇಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಕಬೀರ್ ಸಿಂಗ್, ಪ್ರಮೋದ್ ಶೆಟ್ಟಿ, ರೋಹಿಣಿ ಚಿತ್ರದಲ್ಲಿದ್ದಾರೆ.
ಸುಜಿತ್ ನಂಬಿಯಾರ್ಚಿ ಕಥೆ ಬರೆದಿದ್ದಾರೆ. ಅವರ ಜೊತೆಗೆ ದೀಪು ಪ್ರದೀಪ್ ಸಾಥ್ ನೀಡಿದ್ದಾರೆ. ವಿಕ್ರಮ್ ಮೂರ್, ಫೀನಿಕ್ಸ್ ಪ್ರಭು ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಕನ್ನಡದಲ್ಲಿ ಹೊಂಬಾಳೆ ಫಿಲಂಸ್, ತೆಲುಗಿನಲ್ಲಿ ಮೈತ್ರಿ ಮೂವಿ ಮೇಕರ್ಸ್ ಮತ್ತು ಹಿಂದಿಯಲ್ಲಿ ಅನಿಲ್ ಥಡಾನಿ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…