ಮನರಂಜನೆ

ಅಕ್ಟೋಬರ್‍ನಲ್ಲಿ ‘ಯು/ಐ’ ಬಿಡುಗಡೆ; ಟೀಸರ್‍ನಲ್ಲಿ ದಿನಾಂಕ ಘೋಷಣೆ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಈ ವರ್ಷ ಬಿಡುಗಡೆಯಾಗುವುದೇ ಸಂಶಯ ಎಂಬಂತಹ ಮಾತುಗಳಿದ್ದವು. ಏಕೆಂದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರತಂಡ ಇನ್ನೂ ಬಿಡುಗಡೆ ದಿನಾಂಕವನ್ನೇ ಘೋಷಿಸಿರಲಿಲ್ಲ. ಈಗ ಚಿತ್ರವನ್ನು ಅಕ್ಟೋಬರ್‍ನಲ್ಲಿ ಬಿಡುಗಡೆ ಮಾಡುವುದಾಗಿ ಉಪೇಂದ್ರ ಘೋಷಿಸಿದ್ದಾರೆ.

‘ಯು/ಎ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಇತ್ತು. ಆದರೆ, ಹುಟ್ಟುಹಬ್ಬಕ್ಕೆ ಇನ್ನೊಂದು ತಿಂಗಳವೂ ಇಲ್ಲ. ಹೀಗಿರುವಾಗ ಸೆ. 18ರ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ ಎಂಬ ಖಾತ್ರಿ ಇತ್ತು. ಹಾಗಾದರೆ, ಬೇರೆ ಯಾವಾಗ ಎಂಬ ಪ್ರಶ್ನೆಯೂ ಇತ್ತು. ಮುಂದಿನ ದಿನಗಳಲ್ಲಿ ‘ಮಾರ್ಟಿನ್‍’, ‘ಭೈರತಿ ರಣಗಲ್‍’, ‘ಕೆಡಿ – ದಿ ಡೆವಿಲ್‍’ ಮುಂತಾದ ಚಿತ್ರಗಳು ಬಿಡುಗಡೆಗೆ ಇರುವುದರಿಂದ, ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಬಹುದು ಎಂಬ ಮಾತು ಸಹ ಕೇಳಿ ಬಂದಿತ್ತು.

ಆದರೆ, ಅಷ್ಟು ದಿನ ಕಾಯಬೇಕಿಲ್ಲ, ಚಿತ್ರವನ್ನು ಅಕ್ಟೋಬರ್‍ನಲ್ಲೇ ತೋರಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಈ ಪೋಸ್ಟರ್‍ನಲ್ಲಿ ಚಿತ್ರ ಅಕ್ಟೋಬರ್‍ನಲ್ಲಿ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ. ಆದರೆ, ಬಿಡುಗಡೆಯ ನಿಖರ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ. ಉಪೇಂದ್ರ ಸದ್ಯದಲ್ಲೇ ಒಂದು ಡೈಲಾಗ್‍ ಟೀಸರ್‍ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದು, ಆ ಟೀಸರ್‍ನಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂದು ಅಧಿಕೃತವಾಗಿ ತಿಳಿಸಲಾಗುತ್ತದಂತೆ.

‘ಯು/ಐ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

31 mins ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

35 mins ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

40 mins ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

46 mins ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

51 mins ago