ಮನರಂಜನೆ

ಅಕ್ಟೋಬರ್‍ನಲ್ಲಿ ‘ಯು/ಐ’ ಬಿಡುಗಡೆ; ಟೀಸರ್‍ನಲ್ಲಿ ದಿನಾಂಕ ಘೋಷಣೆ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಈ ವರ್ಷ ಬಿಡುಗಡೆಯಾಗುವುದೇ ಸಂಶಯ ಎಂಬಂತಹ ಮಾತುಗಳಿದ್ದವು. ಏಕೆಂದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರತಂಡ ಇನ್ನೂ ಬಿಡುಗಡೆ ದಿನಾಂಕವನ್ನೇ ಘೋಷಿಸಿರಲಿಲ್ಲ. ಈಗ ಚಿತ್ರವನ್ನು ಅಕ್ಟೋಬರ್‍ನಲ್ಲಿ ಬಿಡುಗಡೆ ಮಾಡುವುದಾಗಿ ಉಪೇಂದ್ರ ಘೋಷಿಸಿದ್ದಾರೆ.

‘ಯು/ಎ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಇತ್ತು. ಆದರೆ, ಹುಟ್ಟುಹಬ್ಬಕ್ಕೆ ಇನ್ನೊಂದು ತಿಂಗಳವೂ ಇಲ್ಲ. ಹೀಗಿರುವಾಗ ಸೆ. 18ರ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ ಎಂಬ ಖಾತ್ರಿ ಇತ್ತು. ಹಾಗಾದರೆ, ಬೇರೆ ಯಾವಾಗ ಎಂಬ ಪ್ರಶ್ನೆಯೂ ಇತ್ತು. ಮುಂದಿನ ದಿನಗಳಲ್ಲಿ ‘ಮಾರ್ಟಿನ್‍’, ‘ಭೈರತಿ ರಣಗಲ್‍’, ‘ಕೆಡಿ – ದಿ ಡೆವಿಲ್‍’ ಮುಂತಾದ ಚಿತ್ರಗಳು ಬಿಡುಗಡೆಗೆ ಇರುವುದರಿಂದ, ಚಿತ್ರ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಆಗಬಹುದು ಎಂಬ ಮಾತು ಸಹ ಕೇಳಿ ಬಂದಿತ್ತು.

ಆದರೆ, ಅಷ್ಟು ದಿನ ಕಾಯಬೇಕಿಲ್ಲ, ಚಿತ್ರವನ್ನು ಅಕ್ಟೋಬರ್‍ನಲ್ಲೇ ತೋರಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಈ ಪೋಸ್ಟರ್‍ನಲ್ಲಿ ಚಿತ್ರ ಅಕ್ಟೋಬರ್‍ನಲ್ಲಿ ಬಿಡುಗಡೆ ಆಗಲಿದೆ ಎಂದು ತಿಳಿಸಲಾಗಿದೆ. ಆದರೆ, ಬಿಡುಗಡೆಯ ನಿಖರ ದಿನಾಂಕವನ್ನು ಸ್ಪಷ್ಟಪಡಿಸಿಲ್ಲ. ಉಪೇಂದ್ರ ಸದ್ಯದಲ್ಲೇ ಒಂದು ಡೈಲಾಗ್‍ ಟೀಸರ್‍ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದು, ಆ ಟೀಸರ್‍ನಲ್ಲಿ ಚಿತ್ರದ ಬಿಡುಗಡೆ ಯಾವಾಗ ಎಂದು ಅಧಿಕೃತವಾಗಿ ತಿಳಿಸಲಾಗುತ್ತದಂತೆ.

‘ಯು/ಐ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

3 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

49 mins ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

2 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

3 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

4 hours ago