ಮನರಂಜನೆ

45’ ಚಿತ್ರದ ಪ್ರಮೋಷನ್‍ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಗಿಯುತ್ತಾ ಬಂದಿವೆ.

ಈ ಚಿತ್ರದ ಪ್ರಮೋಷನಲ್‍ ಹಾಡಿನಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಮೂವರೂ ಜೊತೆಗೆ ಕಾಣಿಸಿಕೊಳ್ಳುತ್ತಿದ್ದು, ಅವರ ಜೊತೆಗೆ ಹೆಜ್ಜೆ ಹಾಕಲು ಉಗಾಂಡದಿಂದ ‘ಜಿಟೊ ಕಿಡ್ಸ್’ ಎಂಬ ನೃತ್ಯಗಾರರ ತಂಡವು ಬೆಂಗಳೂರಿಗೆ ಬಂದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರು ಉಗಾಂಡದಿಂದ ಆಗಮಿಸಿದ ನೃತ್ಯಗಾರರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಈ ಹಾಡಿನ ಕುರಿತು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ‘ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಪ್ರಮೋಷನ್ ಸಾಂಗ್ಸ್ ಇರುತ್ತದೆ. ಆದರೆ, ನಾವು ಸ್ವಲ್ಪ ವಿಭಿನ್ನವಾಗಿ ಮಾಡೋಣ ಅಂದುಕೊಂಡಿದ್ದೇವೆ. ತಮ್ಮ ಅಮೋಘ ನೃತ್ಯದಿಂದ ಇಡೀ ವಿಶ್ವದಲ್ಲೇ ಪ್ರಸಿದ್ದರಾಗಿರುವ ಉಗಾಂಡದ ‘ಜಿಟೊ ಕಿಡ್ಸ್’ ಎಂಬ ನೃತ್ಯಗಾರರ ತಂಡ ಈ ಹಾಡಿನ ಭಾಗವಾಗಲಿದೆ. ಇವರು ಇದೇ ಮೊದಲು ಭಾರತಕ್ಕೆ ಆಗಮಿಸಿ ಈ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ. ಕನ್ನಡದಲ್ಲಿ ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ’ ಎಂದರು.

ಇನ್ನು, ಈ ಚಿತ್ರದ ಪ್ರಚಾರದ ಕೆಲಸಗಳು ಪ್ರಾರಂಭವಾಗಿದ್ದು, ಇತ್ತೀಚೆಗೆ ಶಿವರಾಜ್‌ ಕುಮಾರ್, ಉಪೇಂದ್ರ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ, ಗೀತಾ ಶಿವರಾಜಕುಮಾರ್‍ ಮುಂತಾದವರು ಖಾಸಗಿ ಪ್ಲೇನ್‍ನಲ್ಲಿ ಮುಂಬೈ, ಹೈದರಾಬಾದ್‍, ಚೆನ್ನೈ ಮತ್ತು ಕೊಚ್ಚಿಯಲ್ಲಿ ಚಿತ್ರದ ಪ್ರಚಾರ ಮಾಡಿ ಬಂದಿದ್ದಾರೆ.

ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ. ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

3 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

5 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

5 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

5 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

6 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

6 hours ago