ಮನರಂಜನೆ

45’ ಚಿತ್ರದ ಪ್ರಮೋಷನ್‍ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಗಿಯುತ್ತಾ ಬಂದಿವೆ.

ಈ ಚಿತ್ರದ ಪ್ರಮೋಷನಲ್‍ ಹಾಡಿನಲ್ಲಿ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಮೂವರೂ ಜೊತೆಗೆ ಕಾಣಿಸಿಕೊಳ್ಳುತ್ತಿದ್ದು, ಅವರ ಜೊತೆಗೆ ಹೆಜ್ಜೆ ಹಾಕಲು ಉಗಾಂಡದಿಂದ ‘ಜಿಟೊ ಕಿಡ್ಸ್’ ಎಂಬ ನೃತ್ಯಗಾರರ ತಂಡವು ಬೆಂಗಳೂರಿಗೆ ಬಂದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಅವರು ಉಗಾಂಡದಿಂದ ಆಗಮಿಸಿದ ನೃತ್ಯಗಾರರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಈ ಹಾಡಿನ ಕುರಿತು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ‘ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಪ್ರಮೋಷನ್ ಸಾಂಗ್ಸ್ ಇರುತ್ತದೆ. ಆದರೆ, ನಾವು ಸ್ವಲ್ಪ ವಿಭಿನ್ನವಾಗಿ ಮಾಡೋಣ ಅಂದುಕೊಂಡಿದ್ದೇವೆ. ತಮ್ಮ ಅಮೋಘ ನೃತ್ಯದಿಂದ ಇಡೀ ವಿಶ್ವದಲ್ಲೇ ಪ್ರಸಿದ್ದರಾಗಿರುವ ಉಗಾಂಡದ ‘ಜಿಟೊ ಕಿಡ್ಸ್’ ಎಂಬ ನೃತ್ಯಗಾರರ ತಂಡ ಈ ಹಾಡಿನ ಭಾಗವಾಗಲಿದೆ. ಇವರು ಇದೇ ಮೊದಲು ಭಾರತಕ್ಕೆ ಆಗಮಿಸಿ ಈ ಹಾಡಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇದಕ್ಕಾಗಿ ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ. ಕನ್ನಡದಲ್ಲಿ ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಲಿದ್ದಾರೆ’ ಎಂದರು.

ಇನ್ನು, ಈ ಚಿತ್ರದ ಪ್ರಚಾರದ ಕೆಲಸಗಳು ಪ್ರಾರಂಭವಾಗಿದ್ದು, ಇತ್ತೀಚೆಗೆ ಶಿವರಾಜ್‌ ಕುಮಾರ್, ಉಪೇಂದ್ರ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪಕ ರಮೇಶ್ ರೆಡ್ಡಿ, ಗೀತಾ ಶಿವರಾಜಕುಮಾರ್‍ ಮುಂತಾದವರು ಖಾಸಗಿ ಪ್ಲೇನ್‍ನಲ್ಲಿ ಮುಂಬೈ, ಹೈದರಾಬಾದ್‍, ಚೆನ್ನೈ ಮತ್ತು ಕೊಚ್ಚಿಯಲ್ಲಿ ಚಿತ್ರದ ಪ್ರಚಾರ ಮಾಡಿ ಬಂದಿದ್ದಾರೆ.

ಸೂರಜ್‍ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್‍ ರೆಡ್ಡಿ ನಿರ್ಮಾಣದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ, ರಾಜ್‍ ಬಿ. ಶೆಟ್ಟಿ ಜೊತೆಗೆ ಕೌಸ್ತುಭ ಮಣಿ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್‍ ಜನ್ಯ ಸಂಗೀತ ಮತ್ತು ಸತ್ಯ ಹೆಗಡೆ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

4 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

8 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

15 hours ago