ಮನರಂಜನೆ

UI’ ವಿತರಣೆ ಕೆವಿಎನ್‍ ಪ್ರೊಡಕ್ಷನ್ಸ್ ತೆಕ್ಕೆಗೆ…

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘UI’ ಚಿತ್ರವು ಜಗತ್ತಿನಾದ್ಯಂತ ಡಿಸೆಂಬರ್‍.20ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ವಿತರಣಾ ಹಕ್ಕುಗಳಿಗೆ ಬೇಡಿಕೆ ಹೆಚ್ಚಿದ್ದು, ಕೆಲವು ಪ್ರದೇಶಗಳ ಮಾರಾಟ ಈಗಾಗಲೇ ಮುಗಿದಿದೆ. ವಿಶೇಷವೆಂದರೆ, ಕರ್ನಾಟಕದ ವಿತರಣಾ ಹಕ್ಕುಗಳನ್ನು ಖ್ಯಾತ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್ ತನ್ನದಾಗಿಸಿಕೊಂಡಿದೆ.

ಕರ್ನಾಟಕದಲ್ಲಿ ಚಿತ್ರದ ವಿತರಣೆ ಹಕ್ಕುಗಳನ್ನು ಕೆ.ವಿ.ಎನ್ ಸಂಸ್ಥೆ ಪಡೆದುಕೊಂಡಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಈಗಾಗಲೇ ದೊಡ್ಡ ಮಟ್ಟಕ್ಕೆ ಹೆಸರಿರುವ ಅಲ್ಲು ಅರವಿಂದ್‍ ಒಡೆತನದ ಗೀತಾ ಆರ್ಟ್ಸ್ ಸಂಸ್ಥೆ ವಿತರಿಸತ್ತಿದೆ. ಕೇರಳದಲ್ಲಿ ಎಪಿ ಇಂಟರ್ನ್ಯಾಷನಲ್ ಪ್ರೊಡಕ್ಷನ್ ಹೌಸ್ ಬಿಡುಗಡೆ ಮಾಡಿದರೆ, ಹೊರದೇಶಗಳಲ್ಲಿ ಹೋಮ್ ಸ್ಕ್ರೀನ್ ಎಂಟರ್ಟೈನ್ಮೆಂಟ್ ವಿತರಣೆ ಹಕ್ಕುಗಳನ್ನು ತನ್ನದಾಗಿಸಿಕೊಂಡಿದೆ.

ಕೆಲವು ತಿಂಗಳುಗಳ ಹಿಂದೆ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಟೀಸರ್ ಬಿಡುಗಡೆ ಮಾಡುವುದಕ್ಕೆ ತೆಲುಗಿನ ಜನಪ್ರಿಯ ನಿರ್ಮಾಪಕ ಮತ್ತು ವಿತರಕ ಅಲ್ಲು ಅರವಿಂದ್ ಬಂದಿದ್ದರು. ಚಿತ್ರದ ತೆಲುಗು ಅವತರಣಿಕೆಯನ್ನು ಅವರೇ ಆಂಧ್ರ ಮತ್ತು ತೆಲಂಗಾಣದಲ್ಲಿ ಬಿಡುಗಡೆ ಮಾಡಬಹುದು ಎಂಬ ಮಾತು ಆಗ ಕೇಳಿಬಂದಿತ್ತು. ಅದೀಗ ನಿಜವಾಗಿದ್ದು, ಎರಡೂ ರಾಜ್ಯಗಳಲ್ಲಿ ‘ಯುಐ’ ಚಿತ್ರವನ್ನು ಅಲ್ಲು ಅರವಿಂದ್‍ ಬಿಡುಗಡೆ ಮಾಡುತ್ತಿದ್ದಾರೆ.

ಇನ್ನು, ‘UI’ ಚಿತ್ರವು ಡಿಸೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಚಿತ್ರದ ಇನ್ನು ಕೆಲವೇ ದಿನಗಳಿದ್ದರೂ, ಚಿತ್ರದ ಪ್ರಚಾರ ಮಾತ್ರ ಇನ್ನೂ ಪ್ರಾರಂಭವಾಗಿಲ್ಲ. ಕೆಲವು ತಿಂಗಳುಗಳ ಹಿಂದೆಯೇ ಚಿತ್ರದ ಹಾಡು ಮತ್ತು ಟೀಸರ್‍ ಬಿಡುಗಡೆಯಾಗಿತ್ತು. ಆ ನಂತರ ಚಿತ್ರತಂಡದಿಂದ ಚಿತ್ರದ ಕುರಿತು ಏನೂ ಬಿಡುಗಡೆಯಾಗಿಲ್ಲ. ಹಾಗಾಗಿ, ಚಿತ್ರದ ಹಾಡು ಬಿಡುಗಡೆ ಯಾವಾಗ, ಟ್ರೇಲರ್‍ ಬಿಡುಗಡೆ ಯಾವಾಗ? ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

‘UI’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಜೊತೆಯಾಗಿ ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago