ಮನರಂಜನೆ

ಉಪೇಂದ್ರ ಹುಟ್ಟುಹಬ್ಬಕ್ಕೆ ‘ಯು/ಐ’ ಬಿಡುಗಡೆ?

ಕನ್ನಡದ ನಿರೀಕ್ಷಿತ ಚಿತ್ರಗಳ ಬಿಡುಗಡೆ ದಿನಾಂಕಗಳೆಲ್ಲ ಒಂದರಹಿಂದೊಂದು ಘೋಷಣೆಯಾಗುತ್ತಿವೆ. ಆದರೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರದ ಸುದ್ದಿಯೇ ಇಲ್ಲ. ಮೊದಲಿಗೆ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ನೋಡಿದರೆ, ಉಪೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಉಪೇಂದ್ರ ಅಭಿನಯದ ‘ಯು/ಐ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಇತ್ತೀಚೆಗೆ ಹಂಗೇರಿಯ ಬುಡಾಪೆಸ್ಟ್ನಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸಗಳು ನಡೆಯುತ್ತಿವೆ. ಮಿಕ್ಕಂತೆ ಚಿತ್ರದಲ್ಲಿ ಗ್ರಾಫಿಕ್ಸ್ ಭಾಗ ಜಾಸ್ತಿ ಇರುವುದರಿಂದ ಚಿತ್ರದ ಕೆಲಸಗಳು ಸ್ವಲ್ಪ ತಡವಾಗುತ್ತಿದೆಯಂತೆ. ಮೂಲಗಳ ಪ್ರಕಾರ, ಈ ತಿಂಗಳ ಕೊನೆಗೆಯ ಹೊತ್ತಿಗೆ ಚಿತ್ರದ ಮೊದಲ ಕಾಪಿ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ. ಅದನ್ನು ನೋಡಿಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸುತ್ತಿದ್ದಂತೆ.

ಸದ್ಯಕ್ಕಂತೂ ಮೂಲಗಳು ಹೇಳುವಂತೆ ‘ಯು/ಐ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆಯಂತೆ. ಉಪೇಂದ್ರ ಅವರ ಹುಟ್ಟುಹಬ್ಬ (ಸೆಪ್ಟೆಂಬರ್‍ 18) ಈ ವಾರ ಬುಧವಾರ ಬೀಳಲಿದೆ. ಹಾಗಾಗಿ, ಹುಟ್ಟುಹಬ್ಬದ ಸಂದರ್ಭದಲ್ಲಿ 19 ಅಥವಾ 20ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತಿದೆ.

‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

‘ಯುಐ’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

4 mins ago

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

1 hour ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

1 hour ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

3 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

3 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

4 hours ago