ಮನರಂಜನೆ

ಉಪೇಂದ್ರ ಹುಟ್ಟುಹಬ್ಬಕ್ಕೆ ‘ಯು/ಐ’ ಬಿಡುಗಡೆ?

ಕನ್ನಡದ ನಿರೀಕ್ಷಿತ ಚಿತ್ರಗಳ ಬಿಡುಗಡೆ ದಿನಾಂಕಗಳೆಲ್ಲ ಒಂದರಹಿಂದೊಂದು ಘೋಷಣೆಯಾಗುತ್ತಿವೆ. ಆದರೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರದ ಸುದ್ದಿಯೇ ಇಲ್ಲ. ಮೊದಲಿಗೆ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ನೋಡಿದರೆ, ಉಪೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಉಪೇಂದ್ರ ಅಭಿನಯದ ‘ಯು/ಐ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಇತ್ತೀಚೆಗೆ ಹಂಗೇರಿಯ ಬುಡಾಪೆಸ್ಟ್ನಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸಗಳು ನಡೆಯುತ್ತಿವೆ. ಮಿಕ್ಕಂತೆ ಚಿತ್ರದಲ್ಲಿ ಗ್ರಾಫಿಕ್ಸ್ ಭಾಗ ಜಾಸ್ತಿ ಇರುವುದರಿಂದ ಚಿತ್ರದ ಕೆಲಸಗಳು ಸ್ವಲ್ಪ ತಡವಾಗುತ್ತಿದೆಯಂತೆ. ಮೂಲಗಳ ಪ್ರಕಾರ, ಈ ತಿಂಗಳ ಕೊನೆಗೆಯ ಹೊತ್ತಿಗೆ ಚಿತ್ರದ ಮೊದಲ ಕಾಪಿ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ. ಅದನ್ನು ನೋಡಿಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸುತ್ತಿದ್ದಂತೆ.

ಸದ್ಯಕ್ಕಂತೂ ಮೂಲಗಳು ಹೇಳುವಂತೆ ‘ಯು/ಐ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆಯಂತೆ. ಉಪೇಂದ್ರ ಅವರ ಹುಟ್ಟುಹಬ್ಬ (ಸೆಪ್ಟೆಂಬರ್‍ 18) ಈ ವಾರ ಬುಧವಾರ ಬೀಳಲಿದೆ. ಹಾಗಾಗಿ, ಹುಟ್ಟುಹಬ್ಬದ ಸಂದರ್ಭದಲ್ಲಿ 19 ಅಥವಾ 20ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತಿದೆ.

‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್‍ ಎಂಟರ್‍ಟೈನರ್ಸ್‍ ಸಂಸ್ಥೆಗಳಡಿ ಜಿ. ಮನೋಹರನ್‍ ಮತ್ತು ಶ್ರೀಕಾಂತ್‍ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

‘ಯುಐ’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಭೂಮಿಕಾ

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

3 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

6 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

6 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

6 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

6 hours ago