ಕನ್ನಡದ ನಿರೀಕ್ಷಿತ ಚಿತ್ರಗಳ ಬಿಡುಗಡೆ ದಿನಾಂಕಗಳೆಲ್ಲ ಒಂದರಹಿಂದೊಂದು ಘೋಷಣೆಯಾಗುತ್ತಿವೆ. ಆದರೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರದ ಸುದ್ದಿಯೇ ಇಲ್ಲ. ಮೊದಲಿಗೆ ಆಗಸ್ಟ್ 15ಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈಗ ನೋಡಿದರೆ, ಉಪೇಂದ್ರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಉಪೇಂದ್ರ ಅಭಿನಯದ ‘ಯು/ಐ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಇತ್ತೀಚೆಗೆ ಹಂಗೇರಿಯ ಬುಡಾಪೆಸ್ಟ್ನಲ್ಲಿ ಚಿತ್ರದ ಹಿನ್ನೆಲೆ ಸಂಗೀತದ ಕೆಲಸಗಳು ನಡೆಯುತ್ತಿವೆ. ಮಿಕ್ಕಂತೆ ಚಿತ್ರದಲ್ಲಿ ಗ್ರಾಫಿಕ್ಸ್ ಭಾಗ ಜಾಸ್ತಿ ಇರುವುದರಿಂದ ಚಿತ್ರದ ಕೆಲಸಗಳು ಸ್ವಲ್ಪ ತಡವಾಗುತ್ತಿದೆಯಂತೆ. ಮೂಲಗಳ ಪ್ರಕಾರ, ಈ ತಿಂಗಳ ಕೊನೆಗೆಯ ಹೊತ್ತಿಗೆ ಚಿತ್ರದ ಮೊದಲ ಕಾಪಿ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ. ಅದನ್ನು ನೋಡಿಕೊಂಡು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸುತ್ತಿದ್ದಂತೆ.
ಸದ್ಯಕ್ಕಂತೂ ಮೂಲಗಳು ಹೇಳುವಂತೆ ‘ಯು/ಐ’ ಚಿತ್ರವು ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಹೆಚ್ಚಿದೆಯಂತೆ. ಉಪೇಂದ್ರ ಅವರ ಹುಟ್ಟುಹಬ್ಬ (ಸೆಪ್ಟೆಂಬರ್ 18) ಈ ವಾರ ಬುಧವಾರ ಬೀಳಲಿದೆ. ಹಾಗಾಗಿ, ಹುಟ್ಟುಹಬ್ಬದ ಸಂದರ್ಭದಲ್ಲಿ 19 ಅಥವಾ 20ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತಿದೆ.
‘ಯು/ಐ’ ಚಿತ್ರವನ್ನು ಲಹರಿ ಫಿಲಂಸ್ ಮತ್ತು ವೀನಸ್ ಎಂಟರ್ಟೈನರ್ಸ್ ಸಂಸ್ಥೆಗಳಡಿ ಜಿ. ಮನೋಹರನ್ ಮತ್ತು ಶ್ರೀಕಾಂತ್ ಕೆ.ಪಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡವಲ್ಲದೆ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.
‘ಯುಐ’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದು, ಮಿಕ್ಕಂತೆ ರವಿಶಂಕರ್, ಅಚ್ಯುತ್ ಕುಮಾರ್, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…