ಮನರಂಜನೆ

ಬಿಡುಗಡೆಯಾಗಿ ಮೂರು ತಿಂಗಳ ನಂತರ ಟಿವಿ ಮತ್ತು ಓಟಿಟಿಯಲ್ಲಿ ‘UI’

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್‍ ಆಗಲಿದೆ.

‘UI’ ಚಿತ್ರದ ಟಿವಿ ಮತ್ತು ಓಟಿಟಿ ಹಕ್ಕುಗಳನ್ನು ಜೀ ಕನ್ನಡ ಕೊಂಡಿದ್ದು, ಈ ಚಿತ್ರವನ್ನು ಯುಗಾದ ಹಬ್ಬದ ಪ್ರಯುಕ್ತ ಭಾನುವಾರ ಸಂಜೆ 4.30ಕ್ಕೆ ಪ್ರಸಾರ ಮಾಡಲಿದೆ. ಟಿವಿಯಲ್ಲಿ ಪ್ರಸಾರದ ಜೊತೆಗೆ ಅಂದೇ, ಅದೇ ಸಮಯಕ್ಕೆ ಜಿ5 ಓಟಿಟಿಯಲ್ಲೂ ಪ್ರಸಾರ ಕಾಣಲಿದೆ.

‘UI’ ಚಿತ್ರವು ಡಿಸೆಂಬರ್‍ 20ರಂದು ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂಬ ಸುದ್ದಿ ಇತ್ತು. ಒಟ್ಟಾರೆ ಚಿತ್ರದ ಗಳಿಕೆ 30 ಕೋಟಿ ರೂ.ನಷ್ಟಾಗಿದ್ದು, ಚಿತ್ರಕ್ಕೆ ಹಾಕಿದ ಬಂಡವಾಳಕ್ಕೆ ಹೋಲಿಸಿದರೆ, ಗಳಿಕೆ ಕಡಿಮೆಯಷ್ಟೇ ಅಲ್ಲ, ನಿರ್ಮಾಪಕರಿಗೆ ಚಿತ್ರದಿಂದ ಸಾಕಷ್ಟು ನಷ್ಟವಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡದವರು ಮಾತ್ರ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಬಗ್ಗೆ ಖುಷಿಯಾಗಿದ್ದಷ್ಟೇ ಅಲ್ಲ, ಸಂಭ್ರಮದಲ್ಲಿ ಕೇಕು ಕತ್ತರಿಸಿ ಸಂಭ್ರಮಿಸಿದ್ದರು.

ತಾನಂದುಕೊಂಡಂತೆ ಪ್ರೇಕ್ಷಕರು ಚಿತ್ರವನ್ನು ಚೆನ್ನಾಗಿಯೇ ಡೀಕೋಡ್‍ ಮಾಡಿದ್ದಾರೆ ಎಂದಿದ್ದ ಉಪೇಂದ್ರ, ‘ಈ ಚಿತ್ರದಿಂದ ಏನೇನು ಅರ್ಥವಾಯ್ತು ಎಂಬುದು ಅವರವರಿಗೆ ಬಿಟ್ಟಿದ್ದು. ಅವರವರ ಗ್ರಹಿಕೆಯ ಮೇಲೆ ಚಿತ್ರವು ಬೇರೆ ಬೇರೆ ರೀತಿ ಅರ್ಥವಾಗುತ್ತಾ ಹೋಗುತ್ತದೆ. ಹಾಗೆ ನೋಡಿದರೆ, ಇಲ್ಲಿ ತಲೆಗೆ ಹುಳ ಬಿಡುವಂತದ್ದೇನ್ನೂ ಇಲ್ಲ. ಎಲ್ಲವೂ ನೇರವಾಗಿಯೇ ಇದೆ. ಆದರೆ, ಇಂಥ ಚಿತ್ರಗಳಿಗೆ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂಬ ಸರ್ವಾನುಮತದ ಅಭಿಪ್ರಾಯ ಸಿಗುವುದಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಗ್ರಹಿಸುತ್ತಾರೆ ಮತ್ತು ತಾವು ಅರ್ಥ ಮಾಡಿಕೊಂಡಿದ್ದನ್ನು ಹೇಳುತ್ತಾರೆ’ ಎಂದು ಉಪೇಂದ್ರ ಹೇಳಿಕೊಂಡಿದ್ದರು.

‘UI’ ಚಿತ್ರಕ್ಕೆ ಉಪೇಂದ್ರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನ ಮಾಡಿ, ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ಮಿಕ್ಕಂತೆ ರೀಷ್ಮಾ ನಾಣಯ್ಯ, ನಿಧಿ ಸುಬ್ಬಯ್ಯ, ರವಿಶಂಕರ್‍, ಅಚ್ಯುತ್‍ ಕುಮಾರ್‍, ಸಾಧು ಕೋಕಿಲ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

1 hour ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

2 hours ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

7 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

7 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

7 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

7 hours ago