ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಹಿತ ಹಲವಾರು ಸೆಲೆಬ್ರೆಟಿಗಳ ಹೆಸರು ಸಹಾ ಕೇಳಿ ಬರುತ್ತಿದೆ.
ಈ ಪ್ರಕರಣ ಸಂಬಂಧ ಮೊದಲ ಬಾರಿಗೆ ನಿರ್ಮಾಪಕ ಉಮಾಪತಿ ಅವರು ಮಾತನಾಡಿದ್ದಾರೆ. ಕಾನೂನಿನಡಿ ಏನೆಲ್ಲಾ ನಡೆಯಬೇಕಿದೆಯೋ ಅದೆಲ್ಲಾ ನಡೆಯುತ್ತಿದೆ. ಮಾಡಿದವರ ಪಾಪ ಆಡಿದವರ ಬಾಯಲ್ಲಿ ಎಂದಾಗುವುದು ಬೇಡ. ತಪ್ಪು ಯಾರೇ ಮಾಡಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ ಎಂದಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕಷ್ಟು ವಿಚಾರಗಳನ್ನು ಕೇಳಿದ್ದೇನೆ. ಇದರಲ್ಲಿ ದೊಡ್ಡ ದೊಡ್ಡ ಪ್ರಭಾವಿ ವ್ಯಕ್ತಿಗಳು ಕೈ ಜೋಡಿಸಿದ್ದು, ದರ್ಶನ್ ಹೊರ ತರಲು ಪ್ರಯತ್ನಿಸುತ್ತಿದ್ದಾರೆ. ಇದು ಅವರ ಮನೆಯಲ್ಲೇ ನಡೆದಿದ್ದರೇ ಅವರು ಕೊಲೆ ಮಾಡಿದ ವ್ಯಕ್ತಿಯನ್ನು ಬಿಡಿಸುತ್ತಿದ್ದರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ದರ್ಶನ್ ಅವರು ಲ್ಯಾಂಬೋರ್ಗಿನಿ ತಗೋಳೋಕೆ ಅಡ್ವಾನ್ಸ್ ನೀಡಿದ್ದೇ ನಾನು ಎನ್ನುವ ಮೂಲಕ ಮತ್ತೊಮ್ಮೆ ದರ್ಶನ್ ವಿರುದ್ಧ ಕಿಡಿಕಾರಿದ್ದಾರೆ. ದರ್ಶನ್ ಅವರು ಆ ಲ್ಯಾಂಬೋರ್ಗಿನಿ ಅಂತ ಮೂರೊತ್ತು ಹೇಳುತ್ತಾರಲ್ಲವಾ? ಅದಕ್ಕೆ ಅಡ್ವಾನ್ಸ್ ಕೊಟ್ಟಿದ್ದೆ ನಾನು. ನಾನು ದುಡ್ಡು ಮಾಡಿದ ಮೇಲೆಯೇ ನಿಮ್ಮ ಬಾಸ್ಗೆ ಸಿನಿಮಾ ಮಾಡಿರುವುದು. ನಾನೇನು ಬಿಟ್ಟಿ ಕೆಲಸ ಮಾಡಿಸಿಕೊಂಡಿಲ್ಲ. ಅವರು ಏನು ಬೆಲೆ ಕೊಟ್ಟಿದ್ದಾರೋ ಅದಕ್ಕೆ ತಕ್ಕಂತೆ ಕೆಲಸ ತೆಗೆದುಕೊಂಡಿದ್ದೇನೆ ಎಂದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…