ರಾಮ್ಕುಮಾರ್ ಮಗ ಧೀರೇನ್ ರಾಮ್ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ.
ಅದಕ್ಕೂ ಮೊದಲೇ, ಧೀರೇನ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ‘X&Y’ ಚಿತ್ರದ ನಂತರ ‘ರಾಮಾ ರಾಮಾ ರೇ’ ಖ್ಯಾತಿಯ ನಿರ್ದೇಶಕ ಡಿ. ಸತ್ಯ ಪ್ರಕಾಶ್ ಹೊಸ ಚಿತ್ರದೊಂದಿಗೆ ಘೋಷಿದ್ದಾರೆ. ಈ ಬಾರಿ ಅವರು ರಾಮ್ಕುಮಾರ್ ಮಗ ಧೀರೇನ್ ಜೊತೆಗೆ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರವನ್ನು ಆರ್.ವಿ ಮಲ್ಟಿ ಸಿನಿಸ್ ಕ್ರಿಯೇಟರ್ಸ್ ಸಂಸ್ಥೆಯು ನಿರ್ಮಿಸುತ್ತಿದ್ದು, ದೀಪಾವಳಿ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.
ಇದನ್ನು ಓದಿ: ಕಮ್ಯುನಿಸ್ಟ್ ನಾಯಕ ‘ಗುಮ್ಮಡಿ ನರಸಯ್ಯ’ನಾದ ಶಿವರಾಜಕುಮಾರ್
ದೀಪಾವಳಿ ಪ್ರಯುಕ್ತ ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಪಬ್ಬಾರ್’ ಚಿತ್ರೀಕರಣ ಸಂಪೂರ್ಣವಾದ ನಂತರ ಹೊಸ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ.
ಸದ್ಯಕ್ಕೆ ಚಿತ್ರಕ್ಕೆ ಪ್ರೊಡಕ್ಷನ್ ನಂಬರ್ 1 ಎಂದು ಕರೆಯಲಾಗುತ್ತಿದ್ದು, ಸದ್ಯದಲ್ಲೇ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಕಲಾವಿದರು, ತಂತ್ರಜ್ಞರ ಪಟ್ಟಿ ಸಹ ಹೊರಬೀಳಲಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…