ಮನರಂಜನೆ

ಸತ್ಯಪ್ರಕಾಶ್ ‍ನಿರ್ದೇಶನದಲ್ಲಿ ಧೀರೇನ್‍ ಹೊಸ ಸಿನಿಮಾ

ರಾಮ್‍ಕುಮಾರ್ ಮಗ ಧೀರೇನ್‍ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ.

ಅದಕ್ಕೂ ಮೊದಲೇ, ಧೀರೇನ್‍ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ‘X&Y’ ಚಿತ್ರದ ನಂತರ ‘ರಾಮಾ ರಾಮಾ ರೇ’ ಖ್ಯಾತಿಯ ನಿರ್ದೇಶಕ ಡಿ. ಸತ್ಯ ಪ್ರಕಾಶ್‌ ಹೊಸ ಚಿತ್ರದೊಂದಿಗೆ ಘೋಷಿದ್ದಾರೆ. ಈ ಬಾರಿ ಅವರು ರಾಮ್‍ಕುಮಾರ್ ಮಗ ಧೀರೇನ್‍ ಜೊತೆಗೆ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರವನ್ನು ಆರ್‌.ವಿ ಮಲ್ಟಿ ಸಿನಿಸ್ ಕ್ರಿಯೇಟರ್ಸ್‌ ಸಂಸ್ಥೆಯು ನಿರ್ಮಿಸುತ್ತಿದ್ದು, ದೀಪಾವಳಿ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಇದನ್ನು ಓದಿ: ಕಮ್ಯುನಿಸ್ಟ್ ನಾಯಕ ‘ಗುಮ್ಮಡಿ ನರಸಯ್ಯ’ನಾದ ಶಿವರಾಜಕುಮಾರ್

ದೀಪಾವಳಿ ಪ್ರಯುಕ್ತ ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಪಬ್ಬಾರ್’ ಚಿತ್ರೀಕರಣ ಸಂಪೂರ್ಣವಾದ ನಂತರ ಹೊಸ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ.

ಸದ್ಯಕ್ಕೆ ಚಿತ್ರಕ್ಕೆ ಪ್ರೊಡಕ್ಷನ್‍ ನಂಬರ್‍ 1 ಎಂದು ಕರೆಯಲಾಗುತ್ತಿದ್ದು, ಸದ್ಯದಲ್ಲೇ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಕಲಾವಿದರು, ತಂತ್ರಜ್ಞರ ಪಟ್ಟಿ ಸಹ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

4 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

8 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

8 hours ago