ಮನರಂಜನೆ

ಸತ್ಯಪ್ರಕಾಶ್ ‍ನಿರ್ದೇಶನದಲ್ಲಿ ಧೀರೇನ್‍ ಹೊಸ ಸಿನಿಮಾ

ರಾಮ್‍ಕುಮಾರ್ ಮಗ ಧೀರೇನ್‍ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ.

ಅದಕ್ಕೂ ಮೊದಲೇ, ಧೀರೇನ್‍ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ‘X&Y’ ಚಿತ್ರದ ನಂತರ ‘ರಾಮಾ ರಾಮಾ ರೇ’ ಖ್ಯಾತಿಯ ನಿರ್ದೇಶಕ ಡಿ. ಸತ್ಯ ಪ್ರಕಾಶ್‌ ಹೊಸ ಚಿತ್ರದೊಂದಿಗೆ ಘೋಷಿದ್ದಾರೆ. ಈ ಬಾರಿ ಅವರು ರಾಮ್‍ಕುಮಾರ್ ಮಗ ಧೀರೇನ್‍ ಜೊತೆಗೆ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರವನ್ನು ಆರ್‌.ವಿ ಮಲ್ಟಿ ಸಿನಿಸ್ ಕ್ರಿಯೇಟರ್ಸ್‌ ಸಂಸ್ಥೆಯು ನಿರ್ಮಿಸುತ್ತಿದ್ದು, ದೀಪಾವಳಿ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.

ಇದನ್ನು ಓದಿ: ಕಮ್ಯುನಿಸ್ಟ್ ನಾಯಕ ‘ಗುಮ್ಮಡಿ ನರಸಯ್ಯ’ನಾದ ಶಿವರಾಜಕುಮಾರ್

ದೀಪಾವಳಿ ಪ್ರಯುಕ್ತ ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಪಬ್ಬಾರ್’ ಚಿತ್ರೀಕರಣ ಸಂಪೂರ್ಣವಾದ ನಂತರ ಹೊಸ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ.

ಸದ್ಯಕ್ಕೆ ಚಿತ್ರಕ್ಕೆ ಪ್ರೊಡಕ್ಷನ್‍ ನಂಬರ್‍ 1 ಎಂದು ಕರೆಯಲಾಗುತ್ತಿದ್ದು, ಸದ್ಯದಲ್ಲೇ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಕಲಾವಿದರು, ತಂತ್ರಜ್ಞರ ಪಟ್ಟಿ ಸಹ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago