ರಾಮ್ಕುಮಾರ್ ಮಗ ಧೀರೇನ್ ರಾಮ್ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ.
ಅದಕ್ಕೂ ಮೊದಲೇ, ಧೀರೇನ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ‘X&Y’ ಚಿತ್ರದ ನಂತರ ‘ರಾಮಾ ರಾಮಾ ರೇ’ ಖ್ಯಾತಿಯ ನಿರ್ದೇಶಕ ಡಿ. ಸತ್ಯ ಪ್ರಕಾಶ್ ಹೊಸ ಚಿತ್ರದೊಂದಿಗೆ ಘೋಷಿದ್ದಾರೆ. ಈ ಬಾರಿ ಅವರು ರಾಮ್ಕುಮಾರ್ ಮಗ ಧೀರೇನ್ ಜೊತೆಗೆ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಚಿತ್ರವನ್ನು ಆರ್.ವಿ ಮಲ್ಟಿ ಸಿನಿಸ್ ಕ್ರಿಯೇಟರ್ಸ್ ಸಂಸ್ಥೆಯು ನಿರ್ಮಿಸುತ್ತಿದ್ದು, ದೀಪಾವಳಿ ಪ್ರಯುಕ್ತ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ.
ಇದನ್ನು ಓದಿ: ಕಮ್ಯುನಿಸ್ಟ್ ನಾಯಕ ‘ಗುಮ್ಮಡಿ ನರಸಯ್ಯ’ನಾದ ಶಿವರಾಜಕುಮಾರ್
ದೀಪಾವಳಿ ಪ್ರಯುಕ್ತ ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ಪಬ್ಬಾರ್’ ಚಿತ್ರೀಕರಣ ಸಂಪೂರ್ಣವಾದ ನಂತರ ಹೊಸ ಚಿತ್ರ ಪ್ರಾರಂಭವಾಗುವ ಸಾಧ್ಯತೆ ಇದೆ.
ಸದ್ಯಕ್ಕೆ ಚಿತ್ರಕ್ಕೆ ಪ್ರೊಡಕ್ಷನ್ ನಂಬರ್ 1 ಎಂದು ಕರೆಯಲಾಗುತ್ತಿದ್ದು, ಸದ್ಯದಲ್ಲೇ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಕಲಾವಿದರು, ತಂತ್ರಜ್ಞರ ಪಟ್ಟಿ ಸಹ ಹೊರಬೀಳಲಿದೆ.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…