ಕೋವಿಡ್ ಕಾಲದಲ್ಲಾದ ನೈಜ ಘಟನೆಗಳನ್ನಿಟ್ಟುಕೊಂಡು ಕೆಲವು ಚಿತ್ರಗಳು ಮತ್ತು ವೆಬ್ಸರನಿಗಳು ಈಗಾಗಲೇ ತಯಾರಾಗಿವೆ. ನಾಳೆ (ನವೆಂಬರ್ ೨೨) ಬಿಡುಗಡೆ ಅಗುತ್ತಿರುವ ಶ್ರೀಧರ್ ಶಾಸ್ತ್ರಿ ನಿರ್ದೇಶನದ ʼಟೆನೆಂಟ್ʼ ಸಹ ಒಂದು.
ʼಟೆನೆಂಟ್ʼ ಕೇವಲ ಐದು ಪಾತ್ರಗಳ ಸುತ್ತ ಸುತ್ತುವ ಚಿತ್ರ. ಈ ಚಿತ್ರವು ಒಂದು ಮನೆ ಮತ್ತು ಕೇವಲ ಐದು ಪಾತ್ರಗಳ ಸುತ್ತ ಸುತ್ತುತ್ತದಂತೆ. ಇದರಲ್ಲಿ ಧರ್ಮ ಕೀರ್ತಿರಾಜ್, ʼಉಗ್ರಂʼ ಮಂಜು, ತಿಲಕ್, ರಾಕೇಶ್ ಮಯ್ಯ ಮತ್ತು ಸೋನು ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಶ್ರೀಧರ್ ಶಾಸ್ತ್ರೀ, ʼಕೋವಿಡ್ ಸಮಯದಲ್ಲಿ ಬದುಕೋದೇ ಕಷ್ಟ ಎನ್ನುವಾಗ, ಇಂಥ ಸಂದರ್ಬವನ್ನೂ ಜನ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡರು. ಆಕ್ಸಿಜನ್ ಸಿಲಿಂಡರ್ಗಳನ್ನು ಬ್ಲಾಕ್ನಲ್ಲಿ ಮಾರಾಟ ಮಾಡಲಾಯಿತು. ಆಂಬ್ಯುಲೆನ್ಸ್ ಸಿಗುವುದು ದುಬಾರಿಯಾಯಿತು. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುವ ದಂಧೆ ಶುರುವಾದ ಸುದ್ದಿಗಲು ಕೇಳಿ ಬರುತ್ತಿದ್ದವು. ಈ ಸುದ್ದಿಗಳನ್ನು ಕೇಳಿ ಜನಸಾಮಾನ್ಯರಿಗೆ ಆಘಾತ ಅಘಾತವಾಗುವುದರ ಜೊತೆಗೆ ಬೇಸರವೂ ಆಯಿತು. ಹೀಗೆ ಮಾಧ್ಯಮಗಳಲ್ಲಿ ಓದಿದ ಮತ್ತು ಕೇಳಿದ ಹಲವು ಘಟನೆಗಳನ್ನು ಸೇರಿಸಿ ಒಂದು ಕಥೆ ಮಾಡಿಕೊಂಡೆ. ಕೋವಿಡ್ನ ಕರಾಳ ಮುಖಗಳನ್ನು ತೋರಿಸುವ ನಿಟ್ಟಿನಲ್ಲಿ ಕತೆ ತಯಾರಾಯಿತುʼ ಎನ್ನುತ್ತಾರೆ ಶ್ರೀಧರ್.
ಇಲ್ಲಿ ಧರ್ಮ ಕೀರ್ತಿರಾಜ್ ಮನೆ ಬಾಡಿಗೆದಾರನಾಗಿ ಕಾಣಿಸಿಕೊಂಡರೆ, ಪೊಲೀಸ್ ಅಧಿಕಾರಿಯಾಗಿ ತಿಲಕ್ ಕಾಣಿಸಿಕೊಂಡಿದ್ದಾರೆ. ʼಉಗ್ರಂʼ ಮಂಜು ಈ ಚಿತ್ರದಲ್ಲಿ ಆಂಬ್ಯುಲೆನ್ಸ್ ಡ್ರೈವರ್ ಪಾತ್ರದಲ್ಲಿ ನಟಿಸಿದ್ದು, ಮನೆಯ ಮಾಲೀಕರಾಗಿ ರಾಕೇಶ್ ಮಯ್ಯ ಮತ್ತು ಸೋನು ಗೌಡ ನಟಿಸಿದ್ದಾರೆ.
ಮಾಸ್ಟರ್ ಚಾಯ್ಸ್ ಕ್ರಿಯೇಷನ್ಸ್ನಡಿ ನಾಗರಾಜ್ ಟಿ ನಿರ್ಮಿಸಿರುವ ‘ಟೆನೆಂಟ್’ ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಸಂಕಲನ ಮತ್ತು ಮನೋಹರ್ ಜೋಷಿ ಅವರ ಛಾಯಾಗ್ರಹಣವಿದೆ.
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ನಂಜೆದೇವಪುರ ಗ್ರಾಮದ ಸುತ್ತಮುತ್ತ ಹುಲಿಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಲಾಗಿದೆ. ಚಾಮರಾಜನಗರ ತಾಲ್ಲೂಕಿನ…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳಿನ ಪಂದ್ಯಕ್ಕೆ ಅವಕಾಶ ಇಲ್ಲ ಎಂದು ತಿಳಿದುಬಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ…
ಮೈಸೂರು: ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ವ್ಯಕ್ತಿಯಿಂದ 80 ಸಾವಿರ ರೂ ದೋಚಿದ್ದ ಇಬ್ಬರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ರಮೇಶ್ ಹಾಗೂ…
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…