Categories: ಮನರಂಜನೆ

ʼಟೆನೆಂಟ್ʼನಲ್ಲಿ ಕೋವಿಡ್ ಕಾಲದ ಕರಾಳ ಮುಖದ ಅನಾವರಣ

ಕೋವಿಡ್ ಕಾಲದಲ್ಲಾದ ನೈಜ ಘಟನೆಗಳನ್ನಿಟ್ಟುಕೊಂಡು ಕೆಲವು ಚಿತ್ರಗಳು ಮತ್ತು ವೆಬ್ಸರನಿಗಳು ಈಗಾಗಲೇ ತಯಾರಾಗಿವೆ. ನಾಳೆ (ನವೆಂಬರ್ ೨೨) ಬಿಡುಗಡೆ ಅಗುತ್ತಿರುವ ಶ್ರೀಧರ್ ಶಾಸ್ತ್ರಿ ನಿರ್ದೇಶನದ ʼಟೆನೆಂಟ್ʼ ಸಹ ಒಂದು.

ʼಟೆನೆಂಟ್ʼ ಕೇವಲ ಐದು ಪಾತ್ರಗಳ ಸುತ್ತ ಸುತ್ತುವ ಚಿತ್ರ. ಈ ಚಿತ್ರವು ಒಂದು ಮನೆ ಮತ್ತು ಕೇವಲ ಐದು ಪಾತ್ರಗಳ ಸುತ್ತ ಸುತ್ತುತ್ತದಂತೆ. ಇದರಲ್ಲಿ ಧರ್ಮ ಕೀರ್ತಿರಾಜ್, ʼಉಗ್ರಂʼ ಮಂಜು, ತಿಲಕ್, ರಾಕೇಶ್ ಮಯ್ಯ ಮತ್ತು ಸೋನು ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಶ್ರೀಧರ್ ಶಾಸ್ತ್ರೀ, ʼಕೋವಿಡ್ ಸಮಯದಲ್ಲಿ ಬದುಕೋದೇ ಕಷ್ಟ ಎನ್ನುವಾಗ, ಇಂಥ ಸಂದರ್ಬವನ್ನೂ ಜನ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡರು. ಆಕ್ಸಿಜನ್ ಸಿಲಿಂಡರ್ಗಳನ್ನು ಬ್ಲಾಕ್ನಲ್ಲಿ ಮಾರಾಟ ಮಾಡಲಾಯಿತು. ಆಂಬ್ಯುಲೆನ್ಸ್ ಸಿಗುವುದು ದುಬಾರಿಯಾಯಿತು. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುವ ದಂಧೆ ಶುರುವಾದ ಸುದ್ದಿಗಲು ಕೇಳಿ ಬರುತ್ತಿದ್ದವು. ಈ ಸುದ್ದಿಗಳನ್ನು ಕೇಳಿ ಜನಸಾಮಾನ್ಯರಿಗೆ ಆಘಾತ ಅಘಾತವಾಗುವುದರ ಜೊತೆಗೆ ಬೇಸರವೂ ಆಯಿತು. ಹೀಗೆ ಮಾಧ್ಯಮಗಳಲ್ಲಿ ಓದಿದ ಮತ್ತು ಕೇಳಿದ ಹಲವು ಘಟನೆಗಳನ್ನು ಸೇರಿಸಿ ಒಂದು ಕಥೆ ಮಾಡಿಕೊಂಡೆ. ಕೋವಿಡ್ನ ಕರಾಳ ಮುಖಗಳನ್ನು ತೋರಿಸುವ ನಿಟ್ಟಿನಲ್ಲಿ ಕತೆ ತಯಾರಾಯಿತುʼ ಎನ್ನುತ್ತಾರೆ ಶ್ರೀಧರ್.

ಇಲ್ಲಿ ಧರ್ಮ ಕೀರ್ತಿರಾಜ್ ಮನೆ ಬಾಡಿಗೆದಾರನಾಗಿ ಕಾಣಿಸಿಕೊಂಡರೆ, ಪೊಲೀಸ್ ಅಧಿಕಾರಿಯಾಗಿ ತಿಲಕ್ ಕಾಣಿಸಿಕೊಂಡಿದ್ದಾರೆ. ʼಉಗ್ರಂʼ ಮಂಜು ಈ ಚಿತ್ರದಲ್ಲಿ ಆಂಬ್ಯುಲೆನ್ಸ್ ಡ್ರೈವರ್ ಪಾತ್ರದಲ್ಲಿ ನಟಿಸಿದ್ದು, ಮನೆಯ ಮಾಲೀಕರಾಗಿ ರಾಕೇಶ್ ಮಯ್ಯ ಮತ್ತು ಸೋನು ಗೌಡ ನಟಿಸಿದ್ದಾರೆ.

ಮಾಸ್ಟರ್ ಚಾಯ್ಸ್ ಕ್ರಿಯೇಷನ್ಸ್ನಡಿ ನಾಗರಾಜ್ ಟಿ ನಿರ್ಮಿಸಿರುವ ‘ಟೆನೆಂಟ್‍’ ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಸಂಕಲನ ಮತ್ತು ಮನೋಹರ್‍ ಜೋಷಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

1 hour ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

2 hours ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

3 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

3 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago