Categories: ಮನರಂಜನೆ

ʼಟೆನೆಂಟ್ʼನಲ್ಲಿ ಕೋವಿಡ್ ಕಾಲದ ಕರಾಳ ಮುಖದ ಅನಾವರಣ

ಕೋವಿಡ್ ಕಾಲದಲ್ಲಾದ ನೈಜ ಘಟನೆಗಳನ್ನಿಟ್ಟುಕೊಂಡು ಕೆಲವು ಚಿತ್ರಗಳು ಮತ್ತು ವೆಬ್ಸರನಿಗಳು ಈಗಾಗಲೇ ತಯಾರಾಗಿವೆ. ನಾಳೆ (ನವೆಂಬರ್ ೨೨) ಬಿಡುಗಡೆ ಅಗುತ್ತಿರುವ ಶ್ರೀಧರ್ ಶಾಸ್ತ್ರಿ ನಿರ್ದೇಶನದ ʼಟೆನೆಂಟ್ʼ ಸಹ ಒಂದು.

ʼಟೆನೆಂಟ್ʼ ಕೇವಲ ಐದು ಪಾತ್ರಗಳ ಸುತ್ತ ಸುತ್ತುವ ಚಿತ್ರ. ಈ ಚಿತ್ರವು ಒಂದು ಮನೆ ಮತ್ತು ಕೇವಲ ಐದು ಪಾತ್ರಗಳ ಸುತ್ತ ಸುತ್ತುತ್ತದಂತೆ. ಇದರಲ್ಲಿ ಧರ್ಮ ಕೀರ್ತಿರಾಜ್, ʼಉಗ್ರಂʼ ಮಂಜು, ತಿಲಕ್, ರಾಕೇಶ್ ಮಯ್ಯ ಮತ್ತು ಸೋನು ಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಶ್ರೀಧರ್ ಶಾಸ್ತ್ರೀ, ʼಕೋವಿಡ್ ಸಮಯದಲ್ಲಿ ಬದುಕೋದೇ ಕಷ್ಟ ಎನ್ನುವಾಗ, ಇಂಥ ಸಂದರ್ಬವನ್ನೂ ಜನ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡರು. ಆಕ್ಸಿಜನ್ ಸಿಲಿಂಡರ್ಗಳನ್ನು ಬ್ಲಾಕ್ನಲ್ಲಿ ಮಾರಾಟ ಮಾಡಲಾಯಿತು. ಆಂಬ್ಯುಲೆನ್ಸ್ ಸಿಗುವುದು ದುಬಾರಿಯಾಯಿತು. ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುವ ದಂಧೆ ಶುರುವಾದ ಸುದ್ದಿಗಲು ಕೇಳಿ ಬರುತ್ತಿದ್ದವು. ಈ ಸುದ್ದಿಗಳನ್ನು ಕೇಳಿ ಜನಸಾಮಾನ್ಯರಿಗೆ ಆಘಾತ ಅಘಾತವಾಗುವುದರ ಜೊತೆಗೆ ಬೇಸರವೂ ಆಯಿತು. ಹೀಗೆ ಮಾಧ್ಯಮಗಳಲ್ಲಿ ಓದಿದ ಮತ್ತು ಕೇಳಿದ ಹಲವು ಘಟನೆಗಳನ್ನು ಸೇರಿಸಿ ಒಂದು ಕಥೆ ಮಾಡಿಕೊಂಡೆ. ಕೋವಿಡ್ನ ಕರಾಳ ಮುಖಗಳನ್ನು ತೋರಿಸುವ ನಿಟ್ಟಿನಲ್ಲಿ ಕತೆ ತಯಾರಾಯಿತುʼ ಎನ್ನುತ್ತಾರೆ ಶ್ರೀಧರ್.

ಇಲ್ಲಿ ಧರ್ಮ ಕೀರ್ತಿರಾಜ್ ಮನೆ ಬಾಡಿಗೆದಾರನಾಗಿ ಕಾಣಿಸಿಕೊಂಡರೆ, ಪೊಲೀಸ್ ಅಧಿಕಾರಿಯಾಗಿ ತಿಲಕ್ ಕಾಣಿಸಿಕೊಂಡಿದ್ದಾರೆ. ʼಉಗ್ರಂʼ ಮಂಜು ಈ ಚಿತ್ರದಲ್ಲಿ ಆಂಬ್ಯುಲೆನ್ಸ್ ಡ್ರೈವರ್ ಪಾತ್ರದಲ್ಲಿ ನಟಿಸಿದ್ದು, ಮನೆಯ ಮಾಲೀಕರಾಗಿ ರಾಕೇಶ್ ಮಯ್ಯ ಮತ್ತು ಸೋನು ಗೌಡ ನಟಿಸಿದ್ದಾರೆ.

ಮಾಸ್ಟರ್ ಚಾಯ್ಸ್ ಕ್ರಿಯೇಷನ್ಸ್ನಡಿ ನಾಗರಾಜ್ ಟಿ ನಿರ್ಮಿಸಿರುವ ‘ಟೆನೆಂಟ್‍’ ಚಿತ್ರಕ್ಕೆ ಗಿರೀಶ್ ಹೊತೂರ್ ಸಂಗೀತ, ಉಜ್ವಲ್ ಸಂಕಲನ ಮತ್ತು ಮನೋಹರ್‍ ಜೋಷಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

41 mins ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

3 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago