ಮನರಂಜನೆ

ಶ್ರೀಮಂತ ಉದ್ಯಮಿಯಾದ ಉಪೇಂದ್ರ; ‘ಕರ್ವ’ ನವನೀತ್‍ ಚಿತ್ರದಲ್ಲಿ ನಟನೆ

‘UI’ ಚಿತ್ರ ನಿರ್ದೇಶಿಸುತ್ತಿದ್ದರಿಂದ ಉಪೇಂದ್ರ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿರಲಿಲ್ಲ. ಈಗ ‘UI’ ಬಿಡುಗಡೆಯಾಗಿ ಟಿವಿಯಲ್ಲೂ ಪ್ರಸಾರವಾಗಿದೆ. ಈಗ ಉಪೇಂದ್ರ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಿದೆ. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿರುವ ಸುದ್ದಿ ಕಳೆದ ತಿಂಗಳು ಕೇಳಿ ಬಂದಿತ್ತು. ಇತ್ತೀಚೆಗೆ ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವುದಾಗಿ ಅವರೇ ಘೋಷಿಸಿದ್ದರು.

ಇದೀಗ ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍ ನಿರ್ದೇಶನದ ಚಿತ್ರವೊಂದರಲ್ಲಿ ಅವರು ನಟಿಸುತ್ತಿರುವ ಸುದ್ದಿ ಬಂದಿದೆ. ಉಪೇಂದ್ರ ಈ ಚಿತ್ರದಲ್ಲಿ ಶ್ರೀಮಂತ ಉದ್ಯಮಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಉಪೇಂದ್ರ ಜೊತೆಗೆ ಒಬ್ಬ ಚಿರಪರಿಚಿತ ಕ್ರಿಕೆಟ್‍ ಆಟಗಾರ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇದುವರೆಗೂ ಹಾರರ್ ಚಿತ್ರಗಳನ್ನೇ ಹೆಚ್ಚಾಗಿ ನಿರ್ದೇಶಿಸಿರುವ ನವನೀತ್‍, ಈ ಬಾರಿ ಕ್ರಿಕೆಟ್‍ ಹಿನ್ನೆಲೆಯ ಕಾಮಿಡಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರಂತೆ. ಈ ಚಿತ್ರದ ಒಂದೆಳೆಯನ್ನು ಅವರು ಕೆಲವು ವರ್ಷಗಳ ಹಿಂದೆಯೇ ಹೇಳಿದ್ದರಂತೆ. ಆದರೆ, ಆ ಸಂದರ್ಭದಲ್ಲಿ ಉಪೇಂದ್ರ ತಮ್ಮದೇ ಚಿತ್ರಗಳಲ್ಲಿ ಬ್ಯುಸಿಯಾಗಿದ್ದರಿಂದ, ಈಗ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಚಿತ್ರೀಕರಣ ನಡೆಯಲಿದ್ದು, ಅದನ್ನು ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಮುಹೂರ್ತ ನೆರವೇರಲಿದೆ. ಈ ಚಿತ್ರದ ಬಹುತೇಕ ಚಿತ್ರೀಕರಣ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆಯಂತೆ.

ಈ ಚಿತ್ರವನ್ನು ಯಾರು ನಿರ್ಮಿಸುತ್ತಿದ್ದಾರೆ, ಯಾರೆಲ್ಲಾ ನಟಿಸುತ್ತಿದ್ದಾರೆ, ಯಾರೆಲ್ಲಾ ಕೆಲಸ ಮಾಡುತ್ತಿದ್ದಾರೆ ಎಂಬ ವಿಷಯ ಇನ್ನಷ್ಟೇ ಹೊರಬೀಳಬೇಕಿದೆ.

ಇನ್ನು, ಉಪೇಂದ್ರ ಮಗ ಆಯುಷ್‍ ಸಹ ಹೀರೋ ಆಗುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಆಯುಷ್‍ ಅಭಿನಯದ ಮೊದಲ ಚಿತ್ರವನ್ನು ಪುರುಷೋತ್ತಮ್‍ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್‍ ಸಿರಿವಂತ್‍ ನಿರ್ಮಿಸುತ್ತಿದ್ದಾರೆ

ಆಂದೋಲನ ಡೆಸ್ಕ್

Recent Posts

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

6 mins ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

44 mins ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

2 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

2 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

4 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

4 hours ago