Categories: ಮನರಂಜನೆ

ಗಂಡ ಟಾಲಿವುಡ್‍ಗೆ, ಹೆಂಡತಿ ಬಾಲಿವುಡ್‍ಗೆ; ಬೇರೆ ಬೇರೆ ಭಾಷೆಗಳಲ್ಲಿ ಉಪೇಂದ್ರ, ಪ್ರಿಯಾಂಕಾ ಬ್ಯುಸಿ

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಸದ್ಯಕ್ಕೆ ಈ ಚಿತ್ರವನ್ನು ‘ರಾಪೋ 22’ ಎಂದು ಕರೆಯಲಾಗುತ್ತಿದ್ದು, ಚಿತ್ರದ ಹೆಸರು ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ. ಈ ಚಿತ್ರದ ಮೊದಲ ಝಲಕ್‍, ಮೇ.15ರಂದು ಬಿಡುಗಡೆಯಾಗುತ್ತಿದೆ.

ರಾಮ್‍ ಪೋತಿನೇನಿ ಅಭಿನಯದ ಈ ಚಿತ್ರವನ್ನು ಮಹೇಶ್‍ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆಯು ಈ ಚಿತ್ರವನ್ನು ನಿರ್ಮಿಸುತ್ತಿದೆ. ಉಪೇಂದ್ರ ಅವರ ಪೋಸ್ಟರ್‍ ಬಿಡುಗಡೆ ಆಗಿದ್ದು, ಈ ಚಿತ್ರದಲ್ಲಿ ಅವರು ಸೂರ್ಯ ಕುಮಾರ್ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಆ ಕಡೆ ಉಪೇಂದ್ರ ಟಾಲಿವುಡ್‍ಗೆ ಹೊರಟರೆ, ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ‘ಸೆಪ್ಟೆಂಬರ್‌ 21’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯಲ್ಲಿ ಪ್ರಿಯಾಂಕಾ ಉಪೇಂದ್ರ, ಕೇರ್‌ ಟೇಕರ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಬಾಲಿವುಡ್‌ನ ಪ್ರವೀಣ್ ಸಿಂಗ್ ಸಿಸೋಡಿಯಾ, ಜರೀನಾ ವಹಾಬ್, ಅಮಿತ್ ಬೆಹ್ಲ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಮಲಯಾಳಂ ಬರಹಗಾರ ನೆಲ್ಲೂಲಿ ಪಿ. ರಾಜಶೇಖರನ್ ಬರೆದಿದ್ದಾರೆ. ಕನ್ನಡಿಗ ವಿನಯ್ ಚಂದ್ರ ಸಂಗೀತ ಸಂಯೋಜಿಸಿದರೆ, ಅನಿಲ್ ಕುಮಾರ್ ಛಾಯಾಗ್ರಹಣವಿದೆ. ಸದ್ಯ ಶೂಟಿಂಗ್‌ ಹಂತದಲ್ಲಿರುವ ಈ ಸಿನಿಮಾ, ಅಂತಾರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಗೆ ಸ್ಪರ್ಧಿಸುವುದರ ಜೊತೆಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಬೇರೆ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವಾಗಲೇ, ಅವರ ಮಗ ಆಯುಷ್‍ ಸಹ ಸದ್ಯದಲ್ಲೇ ಹೀರೋ ಆಗಲಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

39 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

49 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago