ಮನರಂಜನೆ

‘ಗೆರಿಲ್ಲಾ WAR’ ಚಿತ್ರಕ್ಕೆ ಉಪೇಂದ್ರ ನಾಯಕ: ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ.

ಉಪೇಂದ್ರ, ಸೆಪ್ಟೆಂಬರ್.18ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು, ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದು ಓಂಪ್ರಕಾಶ್‍ ನಿರ್ದೇಶನದಲ್ಲಿ ಉಪೇಂದ್ರ ಅಭಿನಯದ ಎರಡನೇ ಚಿತ್ರವಾಗಿದೆ. ಇದಕ್ಕೂ ಮೊದಲು ಕೆಲವು ವರ್ಷಗಳ ಹಿಂದೆ ‘ತ್ರಿಶೂಲಂ’ ಎಂಬ ಓಂ ಪ್ರಕಾಶ್‍ ರಾವ್ ‍ನಿರ್ದೇಶನದ ಚಿತ್ರದಲ್ಲಿ ರವಿಚಂದ್ರನ್ ಮತ್ತು ಉಪೇಂದ್ರ ಜೊತೆಯಾಗಿ ನಟಿಸಿದ್ದರು. ಈ ಚಿತ್ರ ಕಾರಣಾಂತರಗಳಿಂದ ತಡವಾಗಿದ್ದು, ಅದರ ಬಿಡುಗಡೆಗೂ ಮೊದಲೇ ‘ಗೆರಿಲ್ಲಾ ವಾರ್’ ಶುರುವಾಗುತ್ತಿದೆ.

ಇದನ್ನು ಓದಿ: ಎಂಟು ವರ್ಷಗಳ ನಂತರ ವಾಪಸ್ಸಾದ ಅಮೂಲ್ಯ: ‘ಪೀಕಬೂ’ ಚಿತ್ರದಲ್ಲಿ ನಟನೆ

ಎನ್.ಎಸ್.ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್.ವಾಸುದೇವ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಡೆನ್ನಿಸಾ ಪ್ರಕಾಶ್ ಅವರು ಬರೆದಿರುವ ಕಥೆಗೆ ಓಂಪ್ರಕಾಶ್ ರಾವ್ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹಂಸಲೇಖ ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತ ಸಂಯೋಜಿಸುತ್ತಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.

ಈ ಚಿತ್ರದ ಕುರಿತು ಮಾತನಾಡಿರುವ ಓಂಪ್ರಕಾಶ್ ರಾವ್‍, ‘ಗೆರಿಲ್ಲಾ WAR’ ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸಿ ಯುದ್ಧ ಮಾಡುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಪ್ರಸಕ್ತ ನಾವು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಉಪೇಂದ್ರ ಅವರು ಈ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ, ಈ ಸೈನಿಕ ಗಡಿ ಮಾತ್ರ ಕಾಯುವ ಸೈನಿಕನಲ್ಲ‌‌. ಪ್ರಸ್ತುತ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಧೀಮಂತ ನಾಯಕ. ಇನ್ನೂ, ಈಗಿನ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಂಡು ಈ ಚಿತ್ರ ಮೂಡಿಬರಲಿದೆ’ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.

ಉಪೇಂದ್ರ ಅವರಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್ ನಟಿಸುತ್ತಿದ್ದಾರೆ. ಮಿಕ್ಕಂತೆ ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಅಚ್ಯುತ್ ರಾವ್, ಭಾಸ್ಕರ್ ಶೆಟ್ಟಿ, ಆರಾಧ್ಯ, ಶ್ವೇತ ವೀರೇಶ್ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

3 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

4 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

4 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

5 hours ago