ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ.
ಇಷ್ಟಕ್ಕೂ ಚಿತ್ರ ಯಾಕೆ ಇಷ್ಟೊಂದು ವಿಳಂಬವಾಗುತ್ತಿದೆ? ಎಂಬ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿ ಇದ್ದೇ ಇದೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿರುವ ಉಪೇಂದ್ರ, ‘ಐದಾರು ಮದುವೆ ಆಗಬಹುದು. ಆದರೆ, ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಬಹಳ ವರ್ಷಗಳ ನಂತರ ನಾನು ನಿರ್ದೇಶಿಸಿರುವ ‘UI’ ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ ಕೆಲಸಗಳು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಚಿತ್ರ ಸ್ವಲ್ಪ ತಡವಾಗಿದೆ. ಚಿತ್ರದ ಮೇಕಿಂಗ್ ಮುಂಚಿನಂತಿಲ್ಲ. ಸಾಕಷ್ಟು ಬದಲಾಗಿದೆ. ಮುಂಚೆಲ್ಲಾ ಒಂದು ಹಾಡನ್ನು ಮೂರು ದಿನಗಳಲ್ಲಿ ಚಿತ್ರೀಕರಣ ಮಾಡುತ್ತಿದ್ದೆವು. ಈಗ 10 ದಿನಗಳಾದರೂ ಬೇಕು. ಹಾಗಾಗಿ ಸ್ವಲ್ಪ ತಡವಾಗಿದೆ. ಇನ್ನು, ಚಿತ್ರ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ’ ಎಂದರು.
ಈ ಚಿತ್ರದಲ್ಲಿ ಜನರ ತಲೆಯಲ್ಲಿರುವ ಹುಳವನ್ನು ತೆಗೆಯುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿರುವ ಅವರು, ‘ಜನ ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಪ್ರತಿಯೊಬ್ಬರೂ ಈಗ ತಂತ್ರಜ್ಞರಾಗಿದ್ದಾರೆ. ಅವರಿಗೆ ತಕ್ಕಂತೆ ಸಿನಿಮಾ ಕೊಡಬೇಕು ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಅಭಿಮಾನಿ ದೇವರು ಯೆಸ್ ಅಂದರೆ ಸಾಕು ಆ ಸಿನಿಮಾ ಸೂಪರ್ ಹಿಟ್’ ಎಂದರು.
ಇನ್ನು, ‘ಯುಐ’ ಚಿತ್ರದಲ್ಲಿ ಉಪೇಂದ್ರ, ಕಲ್ಕಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆಯೂ ಇದೆ. ಈ ಕುರಿತು ಮಾತನಾಡುವ ಅವರು, ‘’ಕಲ್ಕಿ 2898 ಎಡಿ’ ಚಿತ್ರವು ಮೈಥಾಲಜಿಕಲ್ (ಪೌರಾಣಿಕ) ಚಿತ್ರವಾಗಿತ್ತು. ಆದರೆ, ಇದು ಲಾಜಿಕಲ್ ಮತ್ತು ಸೈಕಲಾಜಿಕಲ್ ಚಿತ್ರವಾಗಿರಲಿದೆ’ ಎಂದು ಹೇಳಿದರು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…