ಮನರಂಜನೆ

ಐದಾರು ಮದುವೆ ಆಗಬಹುದು ಚಿತ್ರ ನಿರ್ದೇಶನ ಮಾಡೋದು ಕಷ್ಟ: ಉಪೇಂದ್ರ

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರದ ಬಿಡುಗಡೆ ವಿಳಂಬವಾಗುತ್ತಲೇ ಇದೆ. ಮೊದಲು ಸೆಪ್ಟೆಂಬರ್‌ನಲ್ಲಿ ಬಿಡುಗುಡೆ ಆಗಬಹುದು ಎಂದು ಹೇಳಲಾಯ್ತು. ಆ ನಂತರ ಅಕ್ಟೋಬರ್‍ ಎನ್ನಲಾಯ್ತು. ಉಪೇಂದ್ರ ಈಗಲೂ ಅಕ್ಟೋಬರ್‍ನಲ್ಲಿ ಬಿಡುಗಡೆ ಎಂದು ಹೇಳುತ್ತಿದ್ದಾರಾದರೂ, ಏನು ಬಿಡುಗಡೆ ಎಂದು ಸರಿಯಾಗಿ ಹೇಳುತ್ತಿಲ್ಲ.

ಇಷ್ಟಕ್ಕೂ ಚಿತ್ರ ಯಾಕೆ ಇಷ್ಟೊಂದು ವಿಳಂಬವಾಗುತ್ತಿದೆ? ಎಂಬ ಪ್ರಶ್ನೆ ಅಭಿಮಾನಿಗಳ ವಲಯದಲ್ಲಿ ಇದ್ದೇ ಇದೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾತನಾಡಿರುವ ಉಪೇಂದ್ರ, ‘ಐದಾರು ಮದುವೆ ಆಗಬಹುದು. ಆದರೆ, ಒಂದು ಚಿತ್ರ ನಿರ್ದೇಶನ ಮಾಡುವುದು ಅದಕ್ಕಿಂತ ಕಷ್ಟ. ಬಹಳ ವರ್ಷಗಳ ನಂತರ ನಾನು ನಿರ್ದೇಶಿಸಿರುವ ‘UI’ ಚಿತ್ರ ಬಿಡುಗಡೆಯ ಹಂತಕ್ಕೆ ತಲುಪಿದೆ. ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸಿರುವ ನಿರ್ಮಾಪಕರು ಅಕ್ಟೋಬರ್ ನಲ್ಲಿ ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ. ತಾಂತ್ರಿಕ ಕೆಲಸಗಳು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಚಿತ್ರ ಸ್ವಲ್ಪ ತಡವಾಗಿದೆ. ಚಿತ್ರದ ಮೇಕಿಂಗ್‍ ಮುಂಚಿನಂತಿಲ್ಲ. ಸಾಕಷ್ಟು ಬದಲಾಗಿದೆ. ಮುಂಚೆಲ್ಲಾ ಒಂದು ಹಾಡನ್ನು ಮೂರು ದಿನಗಳಲ್ಲಿ ಚಿತ್ರೀಕರಣ ಮಾಡುತ್ತಿದ್ದೆವು. ಈಗ 10 ದಿನಗಳಾದರೂ ಬೇಕು. ಹಾಗಾಗಿ ಸ್ವಲ್ಪ ತಡವಾಗಿದೆ. ಇನ್ನು, ಚಿತ್ರ ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಬರುತ್ತಿರುವುದರಿಂದ ಬಿಡುಗಡೆ ಸ್ವಲ್ಪ ವಿಳಂಬವಾಗುತ್ತಿದೆ’ ಎಂದರು.

 

ಈ ಚಿತ್ರದಲ್ಲಿ ಜನರ ತಲೆಯಲ್ಲಿರುವ ಹುಳವನ್ನು ತೆಗೆಯುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿರುವ ಅವರು, ‘ಜನ ಯಾವಗಲೂ ನನಗೆ ತಲೆಯಲ್ಲಿ ಹುಳ ಬಿಡುತ್ತೀರಾ ಎನ್ನುತ್ತಾರೆ. ಅದರೆ ಈ ಚಿತ್ರದಲ್ಲಿ ಹುಳ ತೆಗೆಯುವ ಕೆಲಸ ಮಾಡುತ್ತಿದ್ದೇನೆ. ಪ್ರೇಕ್ಷಕರು ನಮಗಿಂತ ತುಂಬಾ ಬುದ್ದಿವಂತರು. ಪ್ರತಿಯೊಬ್ಬರೂ ಈಗ ತಂತ್ರಜ್ಞರಾಗಿದ್ದಾರೆ. ಅವರಿಗೆ ತಕ್ಕಂತೆ ಸಿನಿಮಾ ಕೊಡಬೇಕು ಅವರ ನಿರೀಕ್ಷೆ ಹೆಚ್ಚು ಇರುತ್ತದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಅಭಿಮಾನಿ ದೇವರು ಯೆಸ್ ಅಂದರೆ ಸಾಕು ಆ ಸಿನಿಮಾ ಸೂಪರ್ ಹಿಟ್’ ಎಂದರು.

ಇನ್ನು, ‘ಯುಐ’ ಚಿತ್ರದಲ್ಲಿ ಉಪೇಂದ್ರ, ಕಲ್ಕಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಾ? ಎಂಬ ಪ್ರಶ್ನೆಯೂ ಇದೆ. ಈ ಕುರಿತು ಮಾತನಾಡುವ ಅವರು, ‘’ಕಲ್ಕಿ 2898 ಎಡಿ’ ಚಿತ್ರವು ಮೈಥಾಲಜಿಕಲ್‍ (ಪೌರಾಣಿಕ) ಚಿತ್ರವಾಗಿತ್ತು. ಆದರೆ, ಇದು ಲಾಜಿಕಲ್‍ ಮತ್ತು ಸೈಕಲಾಜಿಕಲ್‍ ಚಿತ್ರವಾಗಿರಲಿದೆ’ ಎಂದು ಹೇಳಿದರು.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago