ಮನರಂಜನೆ

ಉಪೇಂದ್ರ ಹೊಸ ಚಿತ್ರ ʼನೆಕ್ಸ್ಟ್‌ ಲೆವೆಲ್‌ʼ

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಶೀರ್ಷಿಕೆ ಇಡಲಾಗಿದೆ.

ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಅರವಿಂದ್‍ ಹೇಳಿರುವ ಕಥೆಯನ್ನು ತರುಣ್ ಒಪ್ಪಿದ್ದು, ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

ಕನ್ನಡಕ್ಕೆ ಅನೀಶ್‍ ತೇಜೇಶ್ವರ್, ರಕ್ಷಿತ್‍ ಶೆಟ್ಟಿ, ಅರವಿಂದ್‍ ಅಡಿಗ ಮುಂತಾದ ಹೀರೋಗಳನ್ನು ಪರಿಚಯಿಸಿದವರು ಅರವಿಂದ್ ಕೌಶಿಕ್‍. 15 ವರ್ಷಗಳ ಹಿಂದೆ ಬಿಡುಗಡೆಯಾದ ‘ನಮ್‍ ಏರಿಯಾಲ್‍ ಒಂದಿನ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಅರವಿಂದ್ ಕೌಶಿಕ್‍, ಆ ನಂತರ ‘ತುಗ್ಲಕ್‍’, ‘ಹುಲಿರಾಯ’, ‘ಶಾರ್ದೂಲ’ ಮತ್ತು ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಇದುವರೆಗೂ ದೊಡ್ಡ ಯಶಸ್ಸನ್ನು ನೋಡಿಲ್ಲ. ‘ನೆಕ್ಸ್ಟ್ ಲೆವೆಲ್‍’ ಚಿತ್ರದ ಮೂಲಕವಾದರೂ ಅವರು ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ, ಇದೀಗ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ಈ ಮಧ್ಯೆ, ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯೂ ಇದೆ. ಒಟ್ಟಾರೆ ಉಪೇಂದ್ರ ಸದ್ಯ ಕನ್ನಡದಲ್ಲಿ ಬಹಳ ಬ್ಯುಸಿ ನಟರಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅವರ ಅಭಿನಯದ ಮೂರ್ನಾಲ್ಕು ಚಿತ್ರಗಳು ಬಿಡಗುಡೆಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

29 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

40 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

1 hour ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

1 hour ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

3 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago