upendra
ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್ ಶಿವಪ್ಪ ಈ ಚಿತ್ರವನ್ನು ತರುಣ್ ಸ್ಟುಡಿಯೋಸ್ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ʼನೆಕ್ಸ್ಟ್ ಲೆವೆಲ್ʼ ಎಂಬ ಶೀರ್ಷಿಕೆ ಇಡಲಾಗಿದೆ.
ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಅರವಿಂದ್ ಕೌಶಿಕ್ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಅರವಿಂದ್ ಹೇಳಿರುವ ಕಥೆಯನ್ನು ತರುಣ್ ಒಪ್ಪಿದ್ದು, ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.
ಕನ್ನಡಕ್ಕೆ ಅನೀಶ್ ತೇಜೇಶ್ವರ್, ರಕ್ಷಿತ್ ಶೆಟ್ಟಿ, ಅರವಿಂದ್ ಅಡಿಗ ಮುಂತಾದ ಹೀರೋಗಳನ್ನು ಪರಿಚಯಿಸಿದವರು ಅರವಿಂದ್ ಕೌಶಿಕ್. 15 ವರ್ಷಗಳ ಹಿಂದೆ ಬಿಡುಗಡೆಯಾದ ‘ನಮ್ ಏರಿಯಾಲ್ ಒಂದಿನ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಅರವಿಂದ್ ಕೌಶಿಕ್, ಆ ನಂತರ ‘ತುಗ್ಲಕ್’, ‘ಹುಲಿರಾಯ’, ‘ಶಾರ್ದೂಲ’ ಮತ್ತು ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಇದುವರೆಗೂ ದೊಡ್ಡ ಯಶಸ್ಸನ್ನು ನೋಡಿಲ್ಲ. ‘ನೆಕ್ಸ್ಟ್ ಲೆವೆಲ್’ ಚಿತ್ರದ ಮೂಲಕವಾದರೂ ಅವರು ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ, ಇದೀಗ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ತೆಲುಗಿನ ರಾಮ್ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ಈ ಮಧ್ಯೆ, ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯೂ ಇದೆ. ಒಟ್ಟಾರೆ ಉಪೇಂದ್ರ ಸದ್ಯ ಕನ್ನಡದಲ್ಲಿ ಬಹಳ ಬ್ಯುಸಿ ನಟರಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅವರ ಅಭಿನಯದ ಮೂರ್ನಾಲ್ಕು ಚಿತ್ರಗಳು ಬಿಡಗುಡೆಯಾಗಲಿವೆ.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…