ಮನರಂಜನೆ

ಉಪೇಂದ್ರ ಹೊಸ ಚಿತ್ರ ʼನೆಕ್ಸ್ಟ್‌ ಲೆವೆಲ್‌ʼ

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಶೀರ್ಷಿಕೆ ಇಡಲಾಗಿದೆ.

ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಅರವಿಂದ್‍ ಹೇಳಿರುವ ಕಥೆಯನ್ನು ತರುಣ್ ಒಪ್ಪಿದ್ದು, ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

ಕನ್ನಡಕ್ಕೆ ಅನೀಶ್‍ ತೇಜೇಶ್ವರ್, ರಕ್ಷಿತ್‍ ಶೆಟ್ಟಿ, ಅರವಿಂದ್‍ ಅಡಿಗ ಮುಂತಾದ ಹೀರೋಗಳನ್ನು ಪರಿಚಯಿಸಿದವರು ಅರವಿಂದ್ ಕೌಶಿಕ್‍. 15 ವರ್ಷಗಳ ಹಿಂದೆ ಬಿಡುಗಡೆಯಾದ ‘ನಮ್‍ ಏರಿಯಾಲ್‍ ಒಂದಿನ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಅರವಿಂದ್ ಕೌಶಿಕ್‍, ಆ ನಂತರ ‘ತುಗ್ಲಕ್‍’, ‘ಹುಲಿರಾಯ’, ‘ಶಾರ್ದೂಲ’ ಮತ್ತು ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಇದುವರೆಗೂ ದೊಡ್ಡ ಯಶಸ್ಸನ್ನು ನೋಡಿಲ್ಲ. ‘ನೆಕ್ಸ್ಟ್ ಲೆವೆಲ್‍’ ಚಿತ್ರದ ಮೂಲಕವಾದರೂ ಅವರು ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ, ಇದೀಗ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ಈ ಮಧ್ಯೆ, ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯೂ ಇದೆ. ಒಟ್ಟಾರೆ ಉಪೇಂದ್ರ ಸದ್ಯ ಕನ್ನಡದಲ್ಲಿ ಬಹಳ ಬ್ಯುಸಿ ನಟರಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅವರ ಅಭಿನಯದ ಮೂರ್ನಾಲ್ಕು ಚಿತ್ರಗಳು ಬಿಡಗುಡೆಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago