ಮನರಂಜನೆ

ಉಪೇಂದ್ರ ಹೊಸ ಚಿತ್ರ ʼನೆಕ್ಸ್ಟ್‌ ಲೆವೆಲ್‌ʼ

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಶೀರ್ಷಿಕೆ ಇಡಲಾಗಿದೆ.

ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಅರವಿಂದ್‍ ಹೇಳಿರುವ ಕಥೆಯನ್ನು ತರುಣ್ ಒಪ್ಪಿದ್ದು, ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

ಕನ್ನಡಕ್ಕೆ ಅನೀಶ್‍ ತೇಜೇಶ್ವರ್, ರಕ್ಷಿತ್‍ ಶೆಟ್ಟಿ, ಅರವಿಂದ್‍ ಅಡಿಗ ಮುಂತಾದ ಹೀರೋಗಳನ್ನು ಪರಿಚಯಿಸಿದವರು ಅರವಿಂದ್ ಕೌಶಿಕ್‍. 15 ವರ್ಷಗಳ ಹಿಂದೆ ಬಿಡುಗಡೆಯಾದ ‘ನಮ್‍ ಏರಿಯಾಲ್‍ ಒಂದಿನ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಅರವಿಂದ್ ಕೌಶಿಕ್‍, ಆ ನಂತರ ‘ತುಗ್ಲಕ್‍’, ‘ಹುಲಿರಾಯ’, ‘ಶಾರ್ದೂಲ’ ಮತ್ತು ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಇದುವರೆಗೂ ದೊಡ್ಡ ಯಶಸ್ಸನ್ನು ನೋಡಿಲ್ಲ. ‘ನೆಕ್ಸ್ಟ್ ಲೆವೆಲ್‍’ ಚಿತ್ರದ ಮೂಲಕವಾದರೂ ಅವರು ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ, ಇದೀಗ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ಈ ಮಧ್ಯೆ, ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯೂ ಇದೆ. ಒಟ್ಟಾರೆ ಉಪೇಂದ್ರ ಸದ್ಯ ಕನ್ನಡದಲ್ಲಿ ಬಹಳ ಬ್ಯುಸಿ ನಟರಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅವರ ಅಭಿನಯದ ಮೂರ್ನಾಲ್ಕು ಚಿತ್ರಗಳು ಬಿಡಗುಡೆಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

3 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

6 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

8 hours ago