ಮನರಂಜನೆ

ಉಪೇಂದ್ರ ಹೊಸ ಚಿತ್ರ ʼನೆಕ್ಸ್ಟ್‌ ಲೆವೆಲ್‌ʼ

ಸದ್ಯ ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ನಟಿಸುತ್ತಿರುವ ಉಪೇಂದ್ರ, ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ‘ಛೂ ಮಂತರ್ʼ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ತರುಣ್‍ ಶಿವಪ್ಪ ಈ ಚಿತ್ರವನ್ನು ತರುಣ್‍ ಸ್ಟುಡಿಯೋಸ್‍ ಮೂಲಕ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ʼನೆಕ್ಸ್ಟ್‌ ಲೆವೆಲ್‌ʼ ಎಂಬ ಶೀರ್ಷಿಕೆ ಇಡಲಾಗಿದೆ.

ಇದು ಪ್ಯಾನ್‌ ಇಂಡಿಯಾ ಚಿತ್ರವಾಗಿದ್ದು, ಅರವಿಂದ್‌ ಕೌಶಿಕ್‌ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸದ್ಯ ಅರವಿಂದ್‍ ಹೇಳಿರುವ ಕಥೆಯನ್ನು ತರುಣ್ ಒಪ್ಪಿದ್ದು, ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.

ಕನ್ನಡಕ್ಕೆ ಅನೀಶ್‍ ತೇಜೇಶ್ವರ್, ರಕ್ಷಿತ್‍ ಶೆಟ್ಟಿ, ಅರವಿಂದ್‍ ಅಡಿಗ ಮುಂತಾದ ಹೀರೋಗಳನ್ನು ಪರಿಚಯಿಸಿದವರು ಅರವಿಂದ್ ಕೌಶಿಕ್‍. 15 ವರ್ಷಗಳ ಹಿಂದೆ ಬಿಡುಗಡೆಯಾದ ‘ನಮ್‍ ಏರಿಯಾಲ್‍ ಒಂದಿನ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾದ ಅರವಿಂದ್ ಕೌಶಿಕ್‍, ಆ ನಂತರ ‘ತುಗ್ಲಕ್‍’, ‘ಹುಲಿರಾಯ’, ‘ಶಾರ್ದೂಲ’ ಮತ್ತು ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಇದುವರೆಗೂ ದೊಡ್ಡ ಯಶಸ್ಸನ್ನು ನೋಡಿಲ್ಲ. ‘ನೆಕ್ಸ್ಟ್ ಲೆವೆಲ್‍’ ಚಿತ್ರದ ಮೂಲಕವಾದರೂ ಅವರು ಯಶಸ್ಸು ಕಾಣುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

‘UI’ ಚಿತ್ರದ ನಂತರ ಒಂದಿಷ್ಟು ವಿಶ್ರಾಂತಿ ಪಡೆದ ಉಪೇಂದ್ರ, ಇದೀಗ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅವರು ತೆಲುಗಿನ ರಾಮ್‍ ಪೋತಿನೇನಿ ಅಭಿನಯದ ಹೊಸ ಚಿತ್ರದಲ್ಲಿ ನಟಸುತ್ತಿರುವ ಸುದ್ದಿ ಬಂದಿತ್ತು. ಈ ಮಧ್ಯೆ, ‘ಛೂ ಮಂತರ್’ ನಿರ್ದೇಶಿಸಿದ್ದ ‘ಕರ್ವ’ ನವನೀತ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯೂ ಇದೆ. ಒಟ್ಟಾರೆ ಉಪೇಂದ್ರ ಸದ್ಯ ಕನ್ನಡದಲ್ಲಿ ಬಹಳ ಬ್ಯುಸಿ ನಟರಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅವರ ಅಭಿನಯದ ಮೂರ್ನಾಲ್ಕು ಚಿತ್ರಗಳು ಬಿಡಗುಡೆಯಾಗಲಿವೆ.

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

2 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

3 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago