ಮನರಂಜನೆ

ಚಿತ್ರರಂಗಕ್ಕೆ ಉಪೇಂದ್ರ ಮಗ ಆಯುಷ್‍ ಎಂಟ್ರಿ; ಸದ್ಯದಲ್ಲೇ ಹೊಸ ಚಿತ್ರದ ಘೋಷಣೆ

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ ಮಗ ಆಯುಷ್‍ ಸದ್ಯದಲ್ಲೇ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ.

ಆಯುಷ್‍ ಉಪೇಂದ್ರ, ಸೋಮವಾರ ತಮ್ಮ 21ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ ಅವರ ಕುಟುಂಬ ಮಂತ್ರಾಲಯಕ್ಕೆ ತೆರಳಿ ರಾಯರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಬಂದಿದೆ. ಈ ಸಂದರ್ಭದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ಸಹ ನಡೆದಿದ್ದು, ಸೋಷಿಯಲ್‍ ಮೀಡಿಯಾದಲ್ಲಿ ಫೋಟೋಗಳು ವೈರಲ್‍ ಆಗಿವೆ.

ದರ್ಶನದ ನಂತರ ಖಾಸಗೀ ಹೋಟೆಲ್‍ನಲ್ಲಿ ಆಯುಷ್‍ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಸಹೋದರಿ ಐಶ್ವರ್ಯಾ ಮುಂತಾದವರು ಆಯುಷ್‍ಗೆ ಕೇಕ್‍ ತಿನ್ನಿಸಿ ಸಂಭ್ರಮಿಸಿದ್ದಾರೆ.

ಆಯುಷ್‍ ಮೊದಲ ಚಿತ್ರವನ್ನು ಪುರುಷೋತ್ತಮ್‍ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್‍ ಸಿರಿವಂತ್‍ ನಿರ್ಮಿಸುತ್ತಿದ್ದಾರೆ. ಸದ್ಯ ಲೊಕೇಶನ್‍ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಬಳಗವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆಯಂತೆ. ಈ ಚಿತ್ರಕ್ಕೆ ಆಯುಷ್ ಸಾಕಷ್ಟು ತಯಾರಿ ನಡೆಸುತ್ತಿದ್ದು, ಸದ್ಯದಲ್ಲೇ ಫೋಟೋಶೂಟ್‍ ಸಹ ನಡೆಯಲಿದೆ. ಈ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಎಚ್‍.ಸಿ. ವೇಣು ಛಾಯಾಗ್ರಹಣ ಇರಲಿದೆಯಂತೆ.

ಅಂದಹಾಗೆ, ಉಪೇಂದ್ರ ಅವರು ತೆಲುಗಿನ ‘ರಾಪೋ 22’ ಚಿತ್ರದಲ್ಲಿ ನಟಿಸುತ್ತಿದ್ದು, ಇದಲ್ಲದೆ ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನದ ‘ಭಾರ್ಗವ’ ಎಂಬ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‍ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

16 mins ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

3 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

3 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

3 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

3 hours ago

ಆಂತರಿಕ ಕ್ಷೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

3 hours ago