ಮನರಂಜನೆ

ಚಿತ್ರರಂಗಕ್ಕೆ ಉಪೇಂದ್ರ ಮಗ ಆಯುಷ್‍ ಎಂಟ್ರಿ; ಸದ್ಯದಲ್ಲೇ ಹೊಸ ಚಿತ್ರದ ಘೋಷಣೆ

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ ಮಗ ಆಯುಷ್‍ ಸದ್ಯದಲ್ಲೇ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ.

ಆಯುಷ್‍ ಉಪೇಂದ್ರ, ಸೋಮವಾರ ತಮ್ಮ 21ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ ಅವರ ಕುಟುಂಬ ಮಂತ್ರಾಲಯಕ್ಕೆ ತೆರಳಿ ರಾಯರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಬಂದಿದೆ. ಈ ಸಂದರ್ಭದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ಸಹ ನಡೆದಿದ್ದು, ಸೋಷಿಯಲ್‍ ಮೀಡಿಯಾದಲ್ಲಿ ಫೋಟೋಗಳು ವೈರಲ್‍ ಆಗಿವೆ.

ದರ್ಶನದ ನಂತರ ಖಾಸಗೀ ಹೋಟೆಲ್‍ನಲ್ಲಿ ಆಯುಷ್‍ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಸಹೋದರಿ ಐಶ್ವರ್ಯಾ ಮುಂತಾದವರು ಆಯುಷ್‍ಗೆ ಕೇಕ್‍ ತಿನ್ನಿಸಿ ಸಂಭ್ರಮಿಸಿದ್ದಾರೆ.

ಆಯುಷ್‍ ಮೊದಲ ಚಿತ್ರವನ್ನು ಪುರುಷೋತ್ತಮ್‍ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್‍ ಸಿರಿವಂತ್‍ ನಿರ್ಮಿಸುತ್ತಿದ್ದಾರೆ. ಸದ್ಯ ಲೊಕೇಶನ್‍ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಬಳಗವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆಯಂತೆ. ಈ ಚಿತ್ರಕ್ಕೆ ಆಯುಷ್ ಸಾಕಷ್ಟು ತಯಾರಿ ನಡೆಸುತ್ತಿದ್ದು, ಸದ್ಯದಲ್ಲೇ ಫೋಟೋಶೂಟ್‍ ಸಹ ನಡೆಯಲಿದೆ. ಈ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಎಚ್‍.ಸಿ. ವೇಣು ಛಾಯಾಗ್ರಹಣ ಇರಲಿದೆಯಂತೆ.

ಅಂದಹಾಗೆ, ಉಪೇಂದ್ರ ಅವರು ತೆಲುಗಿನ ‘ರಾಪೋ 22’ ಚಿತ್ರದಲ್ಲಿ ನಟಿಸುತ್ತಿದ್ದು, ಇದಲ್ಲದೆ ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನದ ‘ಭಾರ್ಗವ’ ಎಂಬ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‍ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

43 mins ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

11 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

12 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

12 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

12 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

12 hours ago