ಮನರಂಜನೆ

ಚಿತ್ರರಂಗಕ್ಕೆ ಉಪೇಂದ್ರ ಮಗ ಆಯುಷ್‍ ಎಂಟ್ರಿ; ಸದ್ಯದಲ್ಲೇ ಹೊಸ ಚಿತ್ರದ ಘೋಷಣೆ

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ ಮಗ ಆಯುಷ್‍ ಸದ್ಯದಲ್ಲೇ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ.

ಆಯುಷ್‍ ಉಪೇಂದ್ರ, ಸೋಮವಾರ ತಮ್ಮ 21ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ ಅವರ ಕುಟುಂಬ ಮಂತ್ರಾಲಯಕ್ಕೆ ತೆರಳಿ ರಾಯರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಬಂದಿದೆ. ಈ ಸಂದರ್ಭದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ಸಹ ನಡೆದಿದ್ದು, ಸೋಷಿಯಲ್‍ ಮೀಡಿಯಾದಲ್ಲಿ ಫೋಟೋಗಳು ವೈರಲ್‍ ಆಗಿವೆ.

ದರ್ಶನದ ನಂತರ ಖಾಸಗೀ ಹೋಟೆಲ್‍ನಲ್ಲಿ ಆಯುಷ್‍ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಸಹೋದರಿ ಐಶ್ವರ್ಯಾ ಮುಂತಾದವರು ಆಯುಷ್‍ಗೆ ಕೇಕ್‍ ತಿನ್ನಿಸಿ ಸಂಭ್ರಮಿಸಿದ್ದಾರೆ.

ಆಯುಷ್‍ ಮೊದಲ ಚಿತ್ರವನ್ನು ಪುರುಷೋತ್ತಮ್‍ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್‍ ಸಿರಿವಂತ್‍ ನಿರ್ಮಿಸುತ್ತಿದ್ದಾರೆ. ಸದ್ಯ ಲೊಕೇಶನ್‍ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಬಳಗವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆಯಂತೆ. ಈ ಚಿತ್ರಕ್ಕೆ ಆಯುಷ್ ಸಾಕಷ್ಟು ತಯಾರಿ ನಡೆಸುತ್ತಿದ್ದು, ಸದ್ಯದಲ್ಲೇ ಫೋಟೋಶೂಟ್‍ ಸಹ ನಡೆಯಲಿದೆ. ಈ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಎಚ್‍.ಸಿ. ವೇಣು ಛಾಯಾಗ್ರಹಣ ಇರಲಿದೆಯಂತೆ.

ಅಂದಹಾಗೆ, ಉಪೇಂದ್ರ ಅವರು ತೆಲುಗಿನ ‘ರಾಪೋ 22’ ಚಿತ್ರದಲ್ಲಿ ನಟಿಸುತ್ತಿದ್ದು, ಇದಲ್ಲದೆ ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನದ ‘ಭಾರ್ಗವ’ ಎಂಬ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್‍ 21’ ಎಂಬ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

10 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

11 hours ago