ayush upendra
ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ ಮಗ ಆಯುಷ್ ಸದ್ಯದಲ್ಲೇ ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ.
ಆಯುಷ್ ಉಪೇಂದ್ರ, ಸೋಮವಾರ ತಮ್ಮ 21ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ ಅವರ ಕುಟುಂಬ ಮಂತ್ರಾಲಯಕ್ಕೆ ತೆರಳಿ ರಾಯರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಬಂದಿದೆ. ಈ ಸಂದರ್ಭದಲ್ಲಿ ಚಿತ್ರದ ಸ್ಕ್ರಿಪ್ಟ್ ಪೂಜೆ ಸಹ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳು ವೈರಲ್ ಆಗಿವೆ.
ದರ್ಶನದ ನಂತರ ಖಾಸಗೀ ಹೋಟೆಲ್ನಲ್ಲಿ ಆಯುಷ್ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಸಹೋದರಿ ಐಶ್ವರ್ಯಾ ಮುಂತಾದವರು ಆಯುಷ್ಗೆ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ.
ಆಯುಷ್ ಮೊದಲ ಚಿತ್ರವನ್ನು ಪುರುಷೋತ್ತಮ್ ನಿರ್ದೇಶನ ಮಾಡುತ್ತಿದ್ದು, ಅಭಿಷೇಕ್ ಸಿರಿವಂತ್ ನಿರ್ಮಿಸುತ್ತಿದ್ದಾರೆ. ಸದ್ಯ ಲೊಕೇಶನ್ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಬಳಗವನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆಯಂತೆ. ಈ ಚಿತ್ರಕ್ಕೆ ಆಯುಷ್ ಸಾಕಷ್ಟು ತಯಾರಿ ನಡೆಸುತ್ತಿದ್ದು, ಸದ್ಯದಲ್ಲೇ ಫೋಟೋಶೂಟ್ ಸಹ ನಡೆಯಲಿದೆ. ಈ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಎಚ್.ಸಿ. ವೇಣು ಛಾಯಾಗ್ರಹಣ ಇರಲಿದೆಯಂತೆ.
ಅಂದಹಾಗೆ, ಉಪೇಂದ್ರ ಅವರು ತೆಲುಗಿನ ‘ರಾಪೋ 22’ ಚಿತ್ರದಲ್ಲಿ ನಟಿಸುತ್ತಿದ್ದು, ಇದಲ್ಲದೆ ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನದ ‘ಭಾರ್ಗವ’ ಎಂಬ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಪ್ರಿಯಾಂಕಾ ಉಪೇಂದ್ರ, ‘ಸೆಪ್ಟೆಂಬರ್ 21’ ಎಂಬ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…